30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿ ವ್ಯವಹರಿಸಿ ಒಟಿಪಿ ಪಡೆದುಕೊಂಡು ಖಾತೆಯಿಂದ ರೂ.1,46,900 ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ಕೊಕ್ಕಡದ ಮಹಿಳೆಯೋರ್ವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ನಿವಾಸಿ ಹರಿಣಿ (40ವ.) ಮೋಸ ಹೋದ ಮಹಿಳೆ. ಹರಿಣಿ ಅವರು 1 ವಾರದ ಹಿಂದೆ ಜಮೀನು ಮಾರಾಟದ ಹಣವನ್ನು ಬ್ಯಾಂಕಿನಲ್ಲಿ ಜಮೆ ಮಾಡಿದ್ದರು. ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿಯೇ ಹರಿಣಿಯವರ ಜೊತೆಗೆ ಯಾರೋ ಅಪರಿಚಿತರು ವ್ಯವಹರಿಸಿ ಅ.21ರಂದು ಒಟಿಪಿ ಕೇಳಿ ಪಡೆದುಕೊಂಡು ಹರಿಣಿಯವರ ಖಾತೆಯಿಂದ ರೂ.1,46,900 ವರ್ಗಾಯಿಸಿ ಮೋಸ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಹರಿಣಿಯವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2023, ಕಲಂ:419, 420 ಐಪಿಸಿ ಮತ್ತು ಕಲಂ 66(ಸಿ) 66(ಡಿ) ಐಟಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.

Related posts

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!