ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

ಹತ್ಯಡ್ಕ : ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿ, ಸಹಕರಿಸದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಮಹಿಳೆಯೋರ್ವರು ನೀಡಿದ ದೂರಿನಂತೆ ಹತ್ಯಡ್ಕ ಗ್ರಾಮದ ಕಾಪಿನಡ್ಕ ಎಂಬಲ್ಲಿಯ ನಿವಾಸಿ ಕೆ.ಕೆ ರಾಜ ಎಂಬಾತನ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಅ.15 ರಂದು ಪ್ರಕರಣ ದಾಖಲಾಗಿದೆ.


ನೊಂದ ಮಹಿಳೆ ನೀಡಿದ ದೂರಿನಲ್ಲಿ ಹತ್ಯಡ್ಕ ಗ್ರಾಮದ ಕಾಪಿನಡ್ಕ ಎಂಬಲ್ಲಿಯ ನಿವಾಸಿ ಕೆ.ಕೆ ರಾಜ ಎಂಬಾತ ವೀಡಿಯೋ ಕಾಲ್ ನ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ 2023 ಮೇ 29 ರಂದು ಸಾಮಾಜಿಕ ಜಾಲತಾಣದಲ್ಲಿ, ಹರಿಬಿಟ್ಟಿದ್ದು ಇದನ್ನು ತಾನು ಗಮನಿಸಿರಲಿಲ್ಲ. ಅಲ್ಲದೆ ಆರೋಪಿ ಮೊಬೈಲ್ ನನ್ನ ಮೊಬೈಲ್‌ಗೆ ಕರೆ ಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿದಲ್ಲದೆ, ದೈಹಿಕ ಸಂಪರ್ಕಕ್ಕೆ ಸಹಕರಿಸದೇ ಇದ್ದರೆ, ಒಬ್ಬಳೆ ಮನೆಯಲಿರುವ ಸಮಯ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆತನ ಮೇಲಿನ ಭಯದಿಂದ ಈ ವಿಚಾರವನ್ನು ನನ್ನ ಮನೆಯವರಿಗೆ ತಿಳಿಸಿರಲಿಲ್ಲ. ಆದರೆ ದೈಹಿಕ ಸಂಪರ್ಕಕ್ಕೆ ಸಹಕರಿಸದೇ ಇದ್ದರೆ, ನೀಲಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಮಾನ ಕಳೆಯುವುದಾಗಿ ಬೆದರಿಕೆ ಹಾಕಿದ್ದ, ಇದರಿಂದ ಭಯಗೊಂಡು ಈ ವಿಚಾರವನ್ನು, ನಾನು ತಾಯಿ ಮತ್ತು ತಮ್ಮನಿಗೆ ತಿಳಿಸಿದ್ದು, ಆತ ಎಡಿಟ್ ಮಾಡಿ ಆಶ್ಲೀಲ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು ನಂತರ ತಿಳಿದು ಬಂತು. ಆರೋಪಿ ಪದೇ ಪದೇ ರಾತ್ರಿ 9 ಗಂಟೆಯ ಬಳಿಕ ಬರುವಂತೆ ಒತ್ತಾಯಪಡಿಸಿ, ಬೆದರಿಕೆ ಹಾಕುತ್ತಿದ್ದು, ಆತನ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ದೂರನ್ನು ಸ್ವೀಕರಿಸಿದ ಧರ್ಮಸ್ಥಳ ಪೊಲೀಸರು ಆರೋಪಿಯ ಮೇಲೆ ಐಪಿಸಿ 1880 (U-354(1)(೦) 354(1)().354ಅ506)ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya
error: Content is protected !!