April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ನೆರವೇರಿಸಿ ಕಾರ್ಯಕ್ರಮವನ್ನ ಉದ್ದೇಶಿಸಿ ಸೇವಾ ಟ್ರಸ್ಟ್ ನ “ಬನ್ನಿ ಕೈ ಜೋಡಿಸಿ ಅಶಕ್ತರಿಗೆ ಆಸರೆಯಾಗೋಣ ” ಎಂಬ ಸಂದೇಶವು ಪ್ರತೀಯೊಬ್ಬರಲ್ಲು ಮನಮುಟ್ಟುವ ರೀತಿಯಲ್ಲಿದೆ ಇಂತಹ ಸೇವೆಮಾಡುವ ಟ್ರಸ್ಟ್ ಗಳಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿತವಚನಗಳನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಜಿರೆಯ ಮಾಜಿ ಅದ್ಯಕ್ಷ ಶ್ರೀನಿವಾಸ್ ಕೆ , ಗ್ರಾಮ ಪಂಚಾಯತ್ ಉಜಿರೆಯ ಸಿಬ್ಬಂದಿ ನಾಗೇಶ್ ಪೆರ್ಲ, ಕರಿಗಂಧ ಸೇವಾ ಟ್ರಸ್ಟ್ ನ ಸಂಚಾಲಕರಾದ ಕಿರಣ್ ಉಜಿರೆ ತರಬೇತಿಯನ್ನು ಉದ್ದೇಶಿಸಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿಯ ನಂತರದ ಅಣಬೆ ಬೆಳೆಯುವುದು ಮತ್ತು ಮಾರಾಟದ ವ್ಯವಸ್ಥೆಯನ್ನು ಟ್ರಸ್ಟ್ ನ ಮೂಲಕ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಭರತ್, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯ ದಿನೇಶ್ ಉಜಿರೆ ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರದ ಅದ್ಯಕ್ಷರಾದ ರವಿ ಜೆ ಯವರು ಹಾಗೂ ಅಣಬೆ ಬೇಸಾಯ ತರಬೇತಿಯ ತರಬೇತುದಾರರಾದ ಸುಲೈಮಾನ್ ಬೆಳಾಲು ರವರು ಉಪಸ್ಥಿತರಿದ್ದರು .

ವಿಟ್ಲ,ಪುತ್ತೂರು,ಕಾರ್ಕಳ, ಮೂಡುಬಿದಿರೆ, ಬೆಳ್ತಂಗಡಿ, ಹೀಗೆ ನಾನಾ ಊರಿನ ಆಸಕ್ತರು ತರಬೇತಿಯ ಸದುಪಯೋಗ ಪಡೆದುಕೊಂಡರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya
error: Content is protected !!