25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ನೆರವೇರಿಸಿ ಕಾರ್ಯಕ್ರಮವನ್ನ ಉದ್ದೇಶಿಸಿ ಸೇವಾ ಟ್ರಸ್ಟ್ ನ “ಬನ್ನಿ ಕೈ ಜೋಡಿಸಿ ಅಶಕ್ತರಿಗೆ ಆಸರೆಯಾಗೋಣ ” ಎಂಬ ಸಂದೇಶವು ಪ್ರತೀಯೊಬ್ಬರಲ್ಲು ಮನಮುಟ್ಟುವ ರೀತಿಯಲ್ಲಿದೆ ಇಂತಹ ಸೇವೆಮಾಡುವ ಟ್ರಸ್ಟ್ ಗಳಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿತವಚನಗಳನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಜಿರೆಯ ಮಾಜಿ ಅದ್ಯಕ್ಷ ಶ್ರೀನಿವಾಸ್ ಕೆ , ಗ್ರಾಮ ಪಂಚಾಯತ್ ಉಜಿರೆಯ ಸಿಬ್ಬಂದಿ ನಾಗೇಶ್ ಪೆರ್ಲ, ಕರಿಗಂಧ ಸೇವಾ ಟ್ರಸ್ಟ್ ನ ಸಂಚಾಲಕರಾದ ಕಿರಣ್ ಉಜಿರೆ ತರಬೇತಿಯನ್ನು ಉದ್ದೇಶಿಸಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿಯ ನಂತರದ ಅಣಬೆ ಬೆಳೆಯುವುದು ಮತ್ತು ಮಾರಾಟದ ವ್ಯವಸ್ಥೆಯನ್ನು ಟ್ರಸ್ಟ್ ನ ಮೂಲಕ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಭರತ್, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯ ದಿನೇಶ್ ಉಜಿರೆ ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರದ ಅದ್ಯಕ್ಷರಾದ ರವಿ ಜೆ ಯವರು ಹಾಗೂ ಅಣಬೆ ಬೇಸಾಯ ತರಬೇತಿಯ ತರಬೇತುದಾರರಾದ ಸುಲೈಮಾನ್ ಬೆಳಾಲು ರವರು ಉಪಸ್ಥಿತರಿದ್ದರು .

ವಿಟ್ಲ,ಪುತ್ತೂರು,ಕಾರ್ಕಳ, ಮೂಡುಬಿದಿರೆ, ಬೆಳ್ತಂಗಡಿ, ಹೀಗೆ ನಾನಾ ಊರಿನ ಆಸಕ್ತರು ತರಬೇತಿಯ ಸದುಪಯೋಗ ಪಡೆದುಕೊಂಡರು.

Related posts

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya
error: Content is protected !!