September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ನೆರವೇರಿಸಿ ಕಾರ್ಯಕ್ರಮವನ್ನ ಉದ್ದೇಶಿಸಿ ಸೇವಾ ಟ್ರಸ್ಟ್ ನ “ಬನ್ನಿ ಕೈ ಜೋಡಿಸಿ ಅಶಕ್ತರಿಗೆ ಆಸರೆಯಾಗೋಣ ” ಎಂಬ ಸಂದೇಶವು ಪ್ರತೀಯೊಬ್ಬರಲ್ಲು ಮನಮುಟ್ಟುವ ರೀತಿಯಲ್ಲಿದೆ ಇಂತಹ ಸೇವೆಮಾಡುವ ಟ್ರಸ್ಟ್ ಗಳಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿತವಚನಗಳನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಜಿರೆಯ ಮಾಜಿ ಅದ್ಯಕ್ಷ ಶ್ರೀನಿವಾಸ್ ಕೆ , ಗ್ರಾಮ ಪಂಚಾಯತ್ ಉಜಿರೆಯ ಸಿಬ್ಬಂದಿ ನಾಗೇಶ್ ಪೆರ್ಲ, ಕರಿಗಂಧ ಸೇವಾ ಟ್ರಸ್ಟ್ ನ ಸಂಚಾಲಕರಾದ ಕಿರಣ್ ಉಜಿರೆ ತರಬೇತಿಯನ್ನು ಉದ್ದೇಶಿಸಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿಯ ನಂತರದ ಅಣಬೆ ಬೆಳೆಯುವುದು ಮತ್ತು ಮಾರಾಟದ ವ್ಯವಸ್ಥೆಯನ್ನು ಟ್ರಸ್ಟ್ ನ ಮೂಲಕ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಭರತ್, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯ ದಿನೇಶ್ ಉಜಿರೆ ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರದ ಅದ್ಯಕ್ಷರಾದ ರವಿ ಜೆ ಯವರು ಹಾಗೂ ಅಣಬೆ ಬೇಸಾಯ ತರಬೇತಿಯ ತರಬೇತುದಾರರಾದ ಸುಲೈಮಾನ್ ಬೆಳಾಲು ರವರು ಉಪಸ್ಥಿತರಿದ್ದರು .

ವಿಟ್ಲ,ಪುತ್ತೂರು,ಕಾರ್ಕಳ, ಮೂಡುಬಿದಿರೆ, ಬೆಳ್ತಂಗಡಿ, ಹೀಗೆ ನಾನಾ ಊರಿನ ಆಸಕ್ತರು ತರಬೇತಿಯ ಸದುಪಯೋಗ ಪಡೆದುಕೊಂಡರು.

Related posts

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya
error: Content is protected !!