September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿ ವ್ಯವಹರಿಸಿ ಒಟಿಪಿ ಪಡೆದುಕೊಂಡು ಖಾತೆಯಿಂದ ರೂ.1,46,900 ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ಕೊಕ್ಕಡದ ಮಹಿಳೆಯೋರ್ವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ನಿವಾಸಿ ಹರಿಣಿ (40ವ.) ಮೋಸ ಹೋದ ಮಹಿಳೆ. ಹರಿಣಿ ಅವರು 1 ವಾರದ ಹಿಂದೆ ಜಮೀನು ಮಾರಾಟದ ಹಣವನ್ನು ಬ್ಯಾಂಕಿನಲ್ಲಿ ಜಮೆ ಮಾಡಿದ್ದರು. ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿಯೇ ಹರಿಣಿಯವರ ಜೊತೆಗೆ ಯಾರೋ ಅಪರಿಚಿತರು ವ್ಯವಹರಿಸಿ ಅ.21ರಂದು ಒಟಿಪಿ ಕೇಳಿ ಪಡೆದುಕೊಂಡು ಹರಿಣಿಯವರ ಖಾತೆಯಿಂದ ರೂ.1,46,900 ವರ್ಗಾಯಿಸಿ ಮೋಸ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಹರಿಣಿಯವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2023, ಕಲಂ:419, 420 ಐಪಿಸಿ ಮತ್ತು ಕಲಂ 66(ಸಿ) 66(ಡಿ) ಐಟಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!