37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

ಹತ್ಯಡ್ಕ : ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿ, ಸಹಕರಿಸದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಮಹಿಳೆಯೋರ್ವರು ನೀಡಿದ ದೂರಿನಂತೆ ಹತ್ಯಡ್ಕ ಗ್ರಾಮದ ಕಾಪಿನಡ್ಕ ಎಂಬಲ್ಲಿಯ ನಿವಾಸಿ ಕೆ.ಕೆ ರಾಜ ಎಂಬಾತನ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಅ.15 ರಂದು ಪ್ರಕರಣ ದಾಖಲಾಗಿದೆ.


ನೊಂದ ಮಹಿಳೆ ನೀಡಿದ ದೂರಿನಲ್ಲಿ ಹತ್ಯಡ್ಕ ಗ್ರಾಮದ ಕಾಪಿನಡ್ಕ ಎಂಬಲ್ಲಿಯ ನಿವಾಸಿ ಕೆ.ಕೆ ರಾಜ ಎಂಬಾತ ವೀಡಿಯೋ ಕಾಲ್ ನ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ 2023 ಮೇ 29 ರಂದು ಸಾಮಾಜಿಕ ಜಾಲತಾಣದಲ್ಲಿ, ಹರಿಬಿಟ್ಟಿದ್ದು ಇದನ್ನು ತಾನು ಗಮನಿಸಿರಲಿಲ್ಲ. ಅಲ್ಲದೆ ಆರೋಪಿ ಮೊಬೈಲ್ ನನ್ನ ಮೊಬೈಲ್‌ಗೆ ಕರೆ ಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿದಲ್ಲದೆ, ದೈಹಿಕ ಸಂಪರ್ಕಕ್ಕೆ ಸಹಕರಿಸದೇ ಇದ್ದರೆ, ಒಬ್ಬಳೆ ಮನೆಯಲಿರುವ ಸಮಯ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆತನ ಮೇಲಿನ ಭಯದಿಂದ ಈ ವಿಚಾರವನ್ನು ನನ್ನ ಮನೆಯವರಿಗೆ ತಿಳಿಸಿರಲಿಲ್ಲ. ಆದರೆ ದೈಹಿಕ ಸಂಪರ್ಕಕ್ಕೆ ಸಹಕರಿಸದೇ ಇದ್ದರೆ, ನೀಲಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಮಾನ ಕಳೆಯುವುದಾಗಿ ಬೆದರಿಕೆ ಹಾಕಿದ್ದ, ಇದರಿಂದ ಭಯಗೊಂಡು ಈ ವಿಚಾರವನ್ನು, ನಾನು ತಾಯಿ ಮತ್ತು ತಮ್ಮನಿಗೆ ತಿಳಿಸಿದ್ದು, ಆತ ಎಡಿಟ್ ಮಾಡಿ ಆಶ್ಲೀಲ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು ನಂತರ ತಿಳಿದು ಬಂತು. ಆರೋಪಿ ಪದೇ ಪದೇ ರಾತ್ರಿ 9 ಗಂಟೆಯ ಬಳಿಕ ಬರುವಂತೆ ಒತ್ತಾಯಪಡಿಸಿ, ಬೆದರಿಕೆ ಹಾಕುತ್ತಿದ್ದು, ಆತನ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ದೂರನ್ನು ಸ್ವೀಕರಿಸಿದ ಧರ್ಮಸ್ಥಳ ಪೊಲೀಸರು ಆರೋಪಿಯ ಮೇಲೆ ಐಪಿಸಿ 1880 (U-354(1)(೦) 354(1)().354ಅ506)ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya
error: Content is protected !!