23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಮುಂಡಾಜೆ ಬಿ ಕಾರ್ಯಕ್ಷೇತ್ರ ದಲ್ಲಿ ಶ್ರೀ ಲಕ್ಷ್ಮಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆಯನ್ನು ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿಯಾದ ಶ್ರೀಮತಿ ಉಷಾ ರವರು ಉದ್ಘಾಟಿಸಿದರು.

ಅವರು ಒಂದು ಕುಟುಂಬ ಅಭಿವೃದ್ಧಿಯಾಗಬೇಕಾದರೆ ಅದರಲ್ಲಿ ಮಹಿಳೆಯ ಪಾತ್ರ ಮುಖ್ಯವಾಗಿದ್ದು ಮಾತ್ರಶ್ರೀ ಅಮ್ಮನವರು ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಸಾಮಾಜಿಕವಾಗಿ ಮಾನಸಿಕವಾಗಿ ಸದೃಡರಾಗಲು ಹಲವಾರು ಮಾಹಿತಿಗಳನ್ನು ನೀಡಿ ಅವಳ ಪ್ರತಿಭೆಯನ್ನು ಗುರುತಿಸಲು ಕೇಂದ್ರವು ಉತ್ತಮ ವೇದಿಕೆಯಾಗಿದ್ದು ಕೇಂದ್ರದ ಸಭೆಯಲ್ಲಿ ಉತ್ತಮ ರೀತಿಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

ಜ್ಞಾನ ವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು ಜ್ಞಾನ ವಿಕಾಸ ಕೇಂದ್ರದ ಹುಟ್ಟು ಉದ್ದೇಶ ಸಭೆ ನಡೆಸುವ ರೀತಿಯ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಅಕ್ಕುರವರು ವಹಿಸಿದ್ದು ಜ್ಞಾನ ವಿಕಾಸ ಸಂಯೋಜಕಿ ಶರ್ಮಿಳಾ ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು.

Related posts

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!