25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಮುಂಡಾಜೆ ಬಿ ಕಾರ್ಯಕ್ಷೇತ್ರ ದಲ್ಲಿ ಶ್ರೀ ಲಕ್ಷ್ಮಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆಯನ್ನು ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿಯಾದ ಶ್ರೀಮತಿ ಉಷಾ ರವರು ಉದ್ಘಾಟಿಸಿದರು.

ಅವರು ಒಂದು ಕುಟುಂಬ ಅಭಿವೃದ್ಧಿಯಾಗಬೇಕಾದರೆ ಅದರಲ್ಲಿ ಮಹಿಳೆಯ ಪಾತ್ರ ಮುಖ್ಯವಾಗಿದ್ದು ಮಾತ್ರಶ್ರೀ ಅಮ್ಮನವರು ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಸಾಮಾಜಿಕವಾಗಿ ಮಾನಸಿಕವಾಗಿ ಸದೃಡರಾಗಲು ಹಲವಾರು ಮಾಹಿತಿಗಳನ್ನು ನೀಡಿ ಅವಳ ಪ್ರತಿಭೆಯನ್ನು ಗುರುತಿಸಲು ಕೇಂದ್ರವು ಉತ್ತಮ ವೇದಿಕೆಯಾಗಿದ್ದು ಕೇಂದ್ರದ ಸಭೆಯಲ್ಲಿ ಉತ್ತಮ ರೀತಿಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

ಜ್ಞಾನ ವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು ಜ್ಞಾನ ವಿಕಾಸ ಕೇಂದ್ರದ ಹುಟ್ಟು ಉದ್ದೇಶ ಸಭೆ ನಡೆಸುವ ರೀತಿಯ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಅಕ್ಕುರವರು ವಹಿಸಿದ್ದು ಜ್ಞಾನ ವಿಕಾಸ ಸಂಯೋಜಕಿ ಶರ್ಮಿಳಾ ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು.

Related posts

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya
error: Content is protected !!