25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕಣಿಯೂರು : ಮಕ್ಕಳಿಗೆ ಸಂಸ್ಕಾರಯುತವಾದಂಥಹ ಶಿಕ್ಷಣವನ್ನ ಕೊಡಬೇಕು, ಇಂದಿನ ಮಕ್ಕಳು ನಮ್ಮನ್ನು ನೋಡಿ ಕಲಿಯುವವರೇ ಹೊರತು ನಾವು ಹೇಳಿದ್ದನ್ನ ಕಲಿಯುವರಲ್ಲ. ಹಾಗಾಗಿ ನಾವು ಬದಲಾಗಬೇಕಾದ್ದು ಮನೆಯಲ್ಲಿ ನಾವು ಮಾತಾಡುವಂತ ಶಬ್ದದಲ್ಲಿ ನಮಗೆ ಎಚ್ಚರಿಕೆ ಇರಬೇಕು, ಮಗುವಿನ ಮೇಲೆ ನಾವು ತೋರಿಸುವಂತಹ ಪ್ರೀತಿ, ನಾವು ಉಡುವಂತಹ ಬಟ್ಟೆ-ಬರೆ ಹಾಗೂ ಆಹಾರ ಇವುಗಳೆಲ್ಲ ನಮ್ಮ ಮಕ್ಕಳ ಜೀವನವನ್ನ ರೂಪಿಸುವಲ್ಲಿ ಬಹಳ ಮುಖ್ಯವಾಗುತ್ತದೆ. ಜಾತಿ ಸಮುದಾಯಗಳ ಅಭಿವೃದ್ಧಿಯಾಗಬೇಕಾದರೆ ಸಮುದಾಯದ ಮಕ್ಕಳಿಗೆ ಶಿಕ್ಷಣವನ್ನ ಕೊಡಬೇಕು ಎಂದು ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಜಗನ್ನಾಥ್ ಕುಲಾಲ್ ಹೇಳಿದರು.

ಮುಖ್ಯ ಅತಿಥಿ ವಕೀಲರಾದಂತಹ ಉದಯ್ ಕುಲಾಲ್ ಬಂದಾರು ಮಾತನಾಡಿ ಹಿರಿಯರು ನೀಡಿದ ಮಾರ್ಗದರ್ಶನವನ್ನು ಅನುಷ್ಠಾನ ಮಾಡುವುದು ನಮ್ಮ ಮುಖ್ಯ ಜವಾಬ್ದಾರಿಯಾಗಬೇಕು. ಅ.29ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯುವ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ತಾವೆಲ್ಲ ಭಾಗಿಯಾಗಿ ಅದರ ಪ್ರಯೋಜನವನ್ನು ಪಡೆಯಬೇಕು ಎಂದರು.

ಇನ್ನೋರ್ವ ಮುಖ್ಯ ಅತಿಥಿ ರಿಪಬ್ಲಿಕ್ ಕನ್ನಡದ ವಿಡಿಯೋ ಜನರಲಿಸ್ಟ್ ದಿವಾಕರ ಮಲೆಂಗಲ್ ಮಾತನಾಡಿ ನಾನು ಬಾಲ್ಯದಲ್ಲಿರುವಾಗ ಹಣದ ಕೊರತೆಯಿಂದ ಯಕ್ಷಗಾನದ ತರಬೇತಿಯಿಂದ ವಂಚಿತನಾಗಿದ್ದೆ. ಆ ಉದ್ದೇಶದಿಂದಾಗಿ ನನ್ನ ಮಗನ ಹೆಸರಿನಲ್ಲಿ ರಿಷಿ ಫೌಂಡೇಶನ್ ನ ಮೂಲಕ ಉಚಿತ ಯಕ್ಷಗಾನ ತರಬೇತಿಯನ್ನು ನೀಡುತ್ತಿದ್ದೇನೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಹೆಚ್ ವಹಿಸಿಕೊಂಡರು. ಸಂಯೋಜಕ ದಿನೇಶ್ ಅಂತರ, ಅಶೋಕ್ ಹಲೇಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸುಧೀರ್ ಕೆ.ಎನ್ ಸ್ವಾಗತಿಸಿ, ಯುವ ವೇದಿಕೆ ಅಧ್ಯಕ್ಷ ಅಶೋಕ್ ಬರಂಬು ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕು.ನಿಶ್ಮಿತ ಪಿಲಿಗೂಡು ಹಾಗೂ ಕು.ಹರಿಣಾಕ್ಷಿ ಅಂತರ ಮಾಡಿದರು.

Related posts

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya
error: Content is protected !!