32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕಣಿಯೂರು : ಮಕ್ಕಳಿಗೆ ಸಂಸ್ಕಾರಯುತವಾದಂಥಹ ಶಿಕ್ಷಣವನ್ನ ಕೊಡಬೇಕು, ಇಂದಿನ ಮಕ್ಕಳು ನಮ್ಮನ್ನು ನೋಡಿ ಕಲಿಯುವವರೇ ಹೊರತು ನಾವು ಹೇಳಿದ್ದನ್ನ ಕಲಿಯುವರಲ್ಲ. ಹಾಗಾಗಿ ನಾವು ಬದಲಾಗಬೇಕಾದ್ದು ಮನೆಯಲ್ಲಿ ನಾವು ಮಾತಾಡುವಂತ ಶಬ್ದದಲ್ಲಿ ನಮಗೆ ಎಚ್ಚರಿಕೆ ಇರಬೇಕು, ಮಗುವಿನ ಮೇಲೆ ನಾವು ತೋರಿಸುವಂತಹ ಪ್ರೀತಿ, ನಾವು ಉಡುವಂತಹ ಬಟ್ಟೆ-ಬರೆ ಹಾಗೂ ಆಹಾರ ಇವುಗಳೆಲ್ಲ ನಮ್ಮ ಮಕ್ಕಳ ಜೀವನವನ್ನ ರೂಪಿಸುವಲ್ಲಿ ಬಹಳ ಮುಖ್ಯವಾಗುತ್ತದೆ. ಜಾತಿ ಸಮುದಾಯಗಳ ಅಭಿವೃದ್ಧಿಯಾಗಬೇಕಾದರೆ ಸಮುದಾಯದ ಮಕ್ಕಳಿಗೆ ಶಿಕ್ಷಣವನ್ನ ಕೊಡಬೇಕು ಎಂದು ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಜಗನ್ನಾಥ್ ಕುಲಾಲ್ ಹೇಳಿದರು.

ಮುಖ್ಯ ಅತಿಥಿ ವಕೀಲರಾದಂತಹ ಉದಯ್ ಕುಲಾಲ್ ಬಂದಾರು ಮಾತನಾಡಿ ಹಿರಿಯರು ನೀಡಿದ ಮಾರ್ಗದರ್ಶನವನ್ನು ಅನುಷ್ಠಾನ ಮಾಡುವುದು ನಮ್ಮ ಮುಖ್ಯ ಜವಾಬ್ದಾರಿಯಾಗಬೇಕು. ಅ.29ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯುವ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ತಾವೆಲ್ಲ ಭಾಗಿಯಾಗಿ ಅದರ ಪ್ರಯೋಜನವನ್ನು ಪಡೆಯಬೇಕು ಎಂದರು.

ಇನ್ನೋರ್ವ ಮುಖ್ಯ ಅತಿಥಿ ರಿಪಬ್ಲಿಕ್ ಕನ್ನಡದ ವಿಡಿಯೋ ಜನರಲಿಸ್ಟ್ ದಿವಾಕರ ಮಲೆಂಗಲ್ ಮಾತನಾಡಿ ನಾನು ಬಾಲ್ಯದಲ್ಲಿರುವಾಗ ಹಣದ ಕೊರತೆಯಿಂದ ಯಕ್ಷಗಾನದ ತರಬೇತಿಯಿಂದ ವಂಚಿತನಾಗಿದ್ದೆ. ಆ ಉದ್ದೇಶದಿಂದಾಗಿ ನನ್ನ ಮಗನ ಹೆಸರಿನಲ್ಲಿ ರಿಷಿ ಫೌಂಡೇಶನ್ ನ ಮೂಲಕ ಉಚಿತ ಯಕ್ಷಗಾನ ತರಬೇತಿಯನ್ನು ನೀಡುತ್ತಿದ್ದೇನೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಹೆಚ್ ವಹಿಸಿಕೊಂಡರು. ಸಂಯೋಜಕ ದಿನೇಶ್ ಅಂತರ, ಅಶೋಕ್ ಹಲೇಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸುಧೀರ್ ಕೆ.ಎನ್ ಸ್ವಾಗತಿಸಿ, ಯುವ ವೇದಿಕೆ ಅಧ್ಯಕ್ಷ ಅಶೋಕ್ ಬರಂಬು ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕು.ನಿಶ್ಮಿತ ಪಿಲಿಗೂಡು ಹಾಗೂ ಕು.ಹರಿಣಾಕ್ಷಿ ಅಂತರ ಮಾಡಿದರು.

Related posts

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya
error: Content is protected !!