23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕಣಿಯೂರು : ಮಕ್ಕಳಿಗೆ ಸಂಸ್ಕಾರಯುತವಾದಂಥಹ ಶಿಕ್ಷಣವನ್ನ ಕೊಡಬೇಕು, ಇಂದಿನ ಮಕ್ಕಳು ನಮ್ಮನ್ನು ನೋಡಿ ಕಲಿಯುವವರೇ ಹೊರತು ನಾವು ಹೇಳಿದ್ದನ್ನ ಕಲಿಯುವರಲ್ಲ. ಹಾಗಾಗಿ ನಾವು ಬದಲಾಗಬೇಕಾದ್ದು ಮನೆಯಲ್ಲಿ ನಾವು ಮಾತಾಡುವಂತ ಶಬ್ದದಲ್ಲಿ ನಮಗೆ ಎಚ್ಚರಿಕೆ ಇರಬೇಕು, ಮಗುವಿನ ಮೇಲೆ ನಾವು ತೋರಿಸುವಂತಹ ಪ್ರೀತಿ, ನಾವು ಉಡುವಂತಹ ಬಟ್ಟೆ-ಬರೆ ಹಾಗೂ ಆಹಾರ ಇವುಗಳೆಲ್ಲ ನಮ್ಮ ಮಕ್ಕಳ ಜೀವನವನ್ನ ರೂಪಿಸುವಲ್ಲಿ ಬಹಳ ಮುಖ್ಯವಾಗುತ್ತದೆ. ಜಾತಿ ಸಮುದಾಯಗಳ ಅಭಿವೃದ್ಧಿಯಾಗಬೇಕಾದರೆ ಸಮುದಾಯದ ಮಕ್ಕಳಿಗೆ ಶಿಕ್ಷಣವನ್ನ ಕೊಡಬೇಕು ಎಂದು ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಜಗನ್ನಾಥ್ ಕುಲಾಲ್ ಹೇಳಿದರು.

ಮುಖ್ಯ ಅತಿಥಿ ವಕೀಲರಾದಂತಹ ಉದಯ್ ಕುಲಾಲ್ ಬಂದಾರು ಮಾತನಾಡಿ ಹಿರಿಯರು ನೀಡಿದ ಮಾರ್ಗದರ್ಶನವನ್ನು ಅನುಷ್ಠಾನ ಮಾಡುವುದು ನಮ್ಮ ಮುಖ್ಯ ಜವಾಬ್ದಾರಿಯಾಗಬೇಕು. ಅ.29ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯುವ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ತಾವೆಲ್ಲ ಭಾಗಿಯಾಗಿ ಅದರ ಪ್ರಯೋಜನವನ್ನು ಪಡೆಯಬೇಕು ಎಂದರು.

ಇನ್ನೋರ್ವ ಮುಖ್ಯ ಅತಿಥಿ ರಿಪಬ್ಲಿಕ್ ಕನ್ನಡದ ವಿಡಿಯೋ ಜನರಲಿಸ್ಟ್ ದಿವಾಕರ ಮಲೆಂಗಲ್ ಮಾತನಾಡಿ ನಾನು ಬಾಲ್ಯದಲ್ಲಿರುವಾಗ ಹಣದ ಕೊರತೆಯಿಂದ ಯಕ್ಷಗಾನದ ತರಬೇತಿಯಿಂದ ವಂಚಿತನಾಗಿದ್ದೆ. ಆ ಉದ್ದೇಶದಿಂದಾಗಿ ನನ್ನ ಮಗನ ಹೆಸರಿನಲ್ಲಿ ರಿಷಿ ಫೌಂಡೇಶನ್ ನ ಮೂಲಕ ಉಚಿತ ಯಕ್ಷಗಾನ ತರಬೇತಿಯನ್ನು ನೀಡುತ್ತಿದ್ದೇನೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಹೆಚ್ ವಹಿಸಿಕೊಂಡರು. ಸಂಯೋಜಕ ದಿನೇಶ್ ಅಂತರ, ಅಶೋಕ್ ಹಲೇಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸುಧೀರ್ ಕೆ.ಎನ್ ಸ್ವಾಗತಿಸಿ, ಯುವ ವೇದಿಕೆ ಅಧ್ಯಕ್ಷ ಅಶೋಕ್ ಬರಂಬು ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕು.ನಿಶ್ಮಿತ ಪಿಲಿಗೂಡು ಹಾಗೂ ಕು.ಹರಿಣಾಕ್ಷಿ ಅಂತರ ಮಾಡಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya
error: Content is protected !!