September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ನೆರವೇರಿಸಿ ಕಾರ್ಯಕ್ರಮವನ್ನ ಉದ್ದೇಶಿಸಿ ಸೇವಾ ಟ್ರಸ್ಟ್ ನ “ಬನ್ನಿ ಕೈ ಜೋಡಿಸಿ ಅಶಕ್ತರಿಗೆ ಆಸರೆಯಾಗೋಣ ” ಎಂಬ ಸಂದೇಶವು ಪ್ರತೀಯೊಬ್ಬರಲ್ಲು ಮನಮುಟ್ಟುವ ರೀತಿಯಲ್ಲಿದೆ ಇಂತಹ ಸೇವೆಮಾಡುವ ಟ್ರಸ್ಟ್ ಗಳಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿತವಚನಗಳನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಜಿರೆಯ ಮಾಜಿ ಅದ್ಯಕ್ಷ ಶ್ರೀನಿವಾಸ್ ಕೆ , ಗ್ರಾಮ ಪಂಚಾಯತ್ ಉಜಿರೆಯ ಸಿಬ್ಬಂದಿ ನಾಗೇಶ್ ಪೆರ್ಲ, ಕರಿಗಂಧ ಸೇವಾ ಟ್ರಸ್ಟ್ ನ ಸಂಚಾಲಕರಾದ ಕಿರಣ್ ಉಜಿರೆ ತರಬೇತಿಯನ್ನು ಉದ್ದೇಶಿಸಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿಯ ನಂತರದ ಅಣಬೆ ಬೆಳೆಯುವುದು ಮತ್ತು ಮಾರಾಟದ ವ್ಯವಸ್ಥೆಯನ್ನು ಟ್ರಸ್ಟ್ ನ ಮೂಲಕ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಭರತ್, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯ ದಿನೇಶ್ ಉಜಿರೆ ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರದ ಅದ್ಯಕ್ಷರಾದ ರವಿ ಜೆ ಯವರು ಹಾಗೂ ಅಣಬೆ ಬೇಸಾಯ ತರಬೇತಿಯ ತರಬೇತುದಾರರಾದ ಸುಲೈಮಾನ್ ಬೆಳಾಲು ರವರು ಉಪಸ್ಥಿತರಿದ್ದರು .

ವಿಟ್ಲ,ಪುತ್ತೂರು,ಕಾರ್ಕಳ, ಮೂಡುಬಿದಿರೆ, ಬೆಳ್ತಂಗಡಿ, ಹೀಗೆ ನಾನಾ ಊರಿನ ಆಸಕ್ತರು ತರಬೇತಿಯ ಸದುಪಯೋಗ ಪಡೆದುಕೊಂಡರು.

Related posts

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya
error: Content is protected !!