September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿ ವ್ಯವಹರಿಸಿ ಒಟಿಪಿ ಪಡೆದುಕೊಂಡು ಖಾತೆಯಿಂದ ರೂ.1,46,900 ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ಕೊಕ್ಕಡದ ಮಹಿಳೆಯೋರ್ವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ನಿವಾಸಿ ಹರಿಣಿ (40ವ.) ಮೋಸ ಹೋದ ಮಹಿಳೆ. ಹರಿಣಿ ಅವರು 1 ವಾರದ ಹಿಂದೆ ಜಮೀನು ಮಾರಾಟದ ಹಣವನ್ನು ಬ್ಯಾಂಕಿನಲ್ಲಿ ಜಮೆ ಮಾಡಿದ್ದರು. ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿಯೇ ಹರಿಣಿಯವರ ಜೊತೆಗೆ ಯಾರೋ ಅಪರಿಚಿತರು ವ್ಯವಹರಿಸಿ ಅ.21ರಂದು ಒಟಿಪಿ ಕೇಳಿ ಪಡೆದುಕೊಂಡು ಹರಿಣಿಯವರ ಖಾತೆಯಿಂದ ರೂ.1,46,900 ವರ್ಗಾಯಿಸಿ ಮೋಸ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಹರಿಣಿಯವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2023, ಕಲಂ:419, 420 ಐಪಿಸಿ ಮತ್ತು ಕಲಂ 66(ಸಿ) 66(ಡಿ) ಐಟಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ರೂ.1.25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!