July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿ ವ್ಯವಹರಿಸಿ ಒಟಿಪಿ ಪಡೆದುಕೊಂಡು ಖಾತೆಯಿಂದ ರೂ.1,46,900 ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ಕೊಕ್ಕಡದ ಮಹಿಳೆಯೋರ್ವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ನಿವಾಸಿ ಹರಿಣಿ (40ವ.) ಮೋಸ ಹೋದ ಮಹಿಳೆ. ಹರಿಣಿ ಅವರು 1 ವಾರದ ಹಿಂದೆ ಜಮೀನು ಮಾರಾಟದ ಹಣವನ್ನು ಬ್ಯಾಂಕಿನಲ್ಲಿ ಜಮೆ ಮಾಡಿದ್ದರು. ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿಯೇ ಹರಿಣಿಯವರ ಜೊತೆಗೆ ಯಾರೋ ಅಪರಿಚಿತರು ವ್ಯವಹರಿಸಿ ಅ.21ರಂದು ಒಟಿಪಿ ಕೇಳಿ ಪಡೆದುಕೊಂಡು ಹರಿಣಿಯವರ ಖಾತೆಯಿಂದ ರೂ.1,46,900 ವರ್ಗಾಯಿಸಿ ಮೋಸ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಹರಿಣಿಯವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2023, ಕಲಂ:419, 420 ಐಪಿಸಿ ಮತ್ತು ಕಲಂ 66(ಸಿ) 66(ಡಿ) ಐಟಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.

Related posts

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya
error: Content is protected !!