25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

ಹತ್ಯಡ್ಕ : ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿ, ಸಹಕರಿಸದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಮಹಿಳೆಯೋರ್ವರು ನೀಡಿದ ದೂರಿನಂತೆ ಹತ್ಯಡ್ಕ ಗ್ರಾಮದ ಕಾಪಿನಡ್ಕ ಎಂಬಲ್ಲಿಯ ನಿವಾಸಿ ಕೆ.ಕೆ ರಾಜ ಎಂಬಾತನ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಅ.15 ರಂದು ಪ್ರಕರಣ ದಾಖಲಾಗಿದೆ.


ನೊಂದ ಮಹಿಳೆ ನೀಡಿದ ದೂರಿನಲ್ಲಿ ಹತ್ಯಡ್ಕ ಗ್ರಾಮದ ಕಾಪಿನಡ್ಕ ಎಂಬಲ್ಲಿಯ ನಿವಾಸಿ ಕೆ.ಕೆ ರಾಜ ಎಂಬಾತ ವೀಡಿಯೋ ಕಾಲ್ ನ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ 2023 ಮೇ 29 ರಂದು ಸಾಮಾಜಿಕ ಜಾಲತಾಣದಲ್ಲಿ, ಹರಿಬಿಟ್ಟಿದ್ದು ಇದನ್ನು ತಾನು ಗಮನಿಸಿರಲಿಲ್ಲ. ಅಲ್ಲದೆ ಆರೋಪಿ ಮೊಬೈಲ್ ನನ್ನ ಮೊಬೈಲ್‌ಗೆ ಕರೆ ಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿದಲ್ಲದೆ, ದೈಹಿಕ ಸಂಪರ್ಕಕ್ಕೆ ಸಹಕರಿಸದೇ ಇದ್ದರೆ, ಒಬ್ಬಳೆ ಮನೆಯಲಿರುವ ಸಮಯ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆತನ ಮೇಲಿನ ಭಯದಿಂದ ಈ ವಿಚಾರವನ್ನು ನನ್ನ ಮನೆಯವರಿಗೆ ತಿಳಿಸಿರಲಿಲ್ಲ. ಆದರೆ ದೈಹಿಕ ಸಂಪರ್ಕಕ್ಕೆ ಸಹಕರಿಸದೇ ಇದ್ದರೆ, ನೀಲಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಮಾನ ಕಳೆಯುವುದಾಗಿ ಬೆದರಿಕೆ ಹಾಕಿದ್ದ, ಇದರಿಂದ ಭಯಗೊಂಡು ಈ ವಿಚಾರವನ್ನು, ನಾನು ತಾಯಿ ಮತ್ತು ತಮ್ಮನಿಗೆ ತಿಳಿಸಿದ್ದು, ಆತ ಎಡಿಟ್ ಮಾಡಿ ಆಶ್ಲೀಲ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು ನಂತರ ತಿಳಿದು ಬಂತು. ಆರೋಪಿ ಪದೇ ಪದೇ ರಾತ್ರಿ 9 ಗಂಟೆಯ ಬಳಿಕ ಬರುವಂತೆ ಒತ್ತಾಯಪಡಿಸಿ, ಬೆದರಿಕೆ ಹಾಕುತ್ತಿದ್ದು, ಆತನ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ದೂರನ್ನು ಸ್ವೀಕರಿಸಿದ ಧರ್ಮಸ್ಥಳ ಪೊಲೀಸರು ಆರೋಪಿಯ ಮೇಲೆ ಐಪಿಸಿ 1880 (U-354(1)(೦) 354(1)().354ಅ506)ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!