25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

ಹತ್ಯಡ್ಕ : ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿ, ಸಹಕರಿಸದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಮಹಿಳೆಯೋರ್ವರು ನೀಡಿದ ದೂರಿನಂತೆ ಹತ್ಯಡ್ಕ ಗ್ರಾಮದ ಕಾಪಿನಡ್ಕ ಎಂಬಲ್ಲಿಯ ನಿವಾಸಿ ಕೆ.ಕೆ ರಾಜ ಎಂಬಾತನ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಅ.15 ರಂದು ಪ್ರಕರಣ ದಾಖಲಾಗಿದೆ.


ನೊಂದ ಮಹಿಳೆ ನೀಡಿದ ದೂರಿನಲ್ಲಿ ಹತ್ಯಡ್ಕ ಗ್ರಾಮದ ಕಾಪಿನಡ್ಕ ಎಂಬಲ್ಲಿಯ ನಿವಾಸಿ ಕೆ.ಕೆ ರಾಜ ಎಂಬಾತ ವೀಡಿಯೋ ಕಾಲ್ ನ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ 2023 ಮೇ 29 ರಂದು ಸಾಮಾಜಿಕ ಜಾಲತಾಣದಲ್ಲಿ, ಹರಿಬಿಟ್ಟಿದ್ದು ಇದನ್ನು ತಾನು ಗಮನಿಸಿರಲಿಲ್ಲ. ಅಲ್ಲದೆ ಆರೋಪಿ ಮೊಬೈಲ್ ನನ್ನ ಮೊಬೈಲ್‌ಗೆ ಕರೆ ಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿದಲ್ಲದೆ, ದೈಹಿಕ ಸಂಪರ್ಕಕ್ಕೆ ಸಹಕರಿಸದೇ ಇದ್ದರೆ, ಒಬ್ಬಳೆ ಮನೆಯಲಿರುವ ಸಮಯ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆತನ ಮೇಲಿನ ಭಯದಿಂದ ಈ ವಿಚಾರವನ್ನು ನನ್ನ ಮನೆಯವರಿಗೆ ತಿಳಿಸಿರಲಿಲ್ಲ. ಆದರೆ ದೈಹಿಕ ಸಂಪರ್ಕಕ್ಕೆ ಸಹಕರಿಸದೇ ಇದ್ದರೆ, ನೀಲಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಮಾನ ಕಳೆಯುವುದಾಗಿ ಬೆದರಿಕೆ ಹಾಕಿದ್ದ, ಇದರಿಂದ ಭಯಗೊಂಡು ಈ ವಿಚಾರವನ್ನು, ನಾನು ತಾಯಿ ಮತ್ತು ತಮ್ಮನಿಗೆ ತಿಳಿಸಿದ್ದು, ಆತ ಎಡಿಟ್ ಮಾಡಿ ಆಶ್ಲೀಲ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು ನಂತರ ತಿಳಿದು ಬಂತು. ಆರೋಪಿ ಪದೇ ಪದೇ ರಾತ್ರಿ 9 ಗಂಟೆಯ ಬಳಿಕ ಬರುವಂತೆ ಒತ್ತಾಯಪಡಿಸಿ, ಬೆದರಿಕೆ ಹಾಕುತ್ತಿದ್ದು, ಆತನ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ದೂರನ್ನು ಸ್ವೀಕರಿಸಿದ ಧರ್ಮಸ್ಥಳ ಪೊಲೀಸರು ಆರೋಪಿಯ ಮೇಲೆ ಐಪಿಸಿ 1880 (U-354(1)(೦) 354(1)().354ಅ506)ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
error: Content is protected !!