September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್ ಬುಕ್ ಜಾಲತಾಣದಲ್ಲಿ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು, ಬೆದರಿಕೆ ಒಡ್ಡುವ ಮೇಸೆಜ್ ಹಾಕಿರುವವ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಉಜಿರೆ ಗ್ರಾಮದ ಪೆರ್ಲಗುತ್ತು ನಿವಾಸಿ ಶ್ರೀಮತಿ ಉಷಾ ಶಶಿಧರ ಶೆಟ್ಟಿಯವರು ಅ.21ರಂದು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಫೇಸ್ ಬುಕ್ ಜಾಲತಾಣದಲ್ಲಿ ಕುಮಾರಿ ಸೌಜನ್ಯ ಎಂಬ ಪೇಸ್ ಬುಕ್ ಖಾತೆಯ ಅಡ್ಮಿನ್‌ರವರು ಅ. 16 ರಂದು ತನ್ನ ಚಾರಿತ್ರ್ಯಕ್ಕೆ ಧಕ್ಕೆಯಾಗುವಂತಹ ಅಸಭ್ಯ ಮತ್ತು ಅಪಮಾನಿಸುವ ಬರಹಗಳನ್ನು ಬರೆಯಲಾಗಿದೆ. ಅ.19 ರಂದು ರಾಧಿಕಾ ಕಾಸರಗೋಡು ಎಂಬ ಫೇಸ್ ಬುಕ್ ಖಾತೆಯ ಅನಿತಾ ಶ್ಯಾನ್ ಬೋಗ್ ಎಂಬವರ ಖಾತೆಯಿಂದ ತನಗೆ ಮುಂದೆ ಇದೆ ಮಾರಿ ಹಬ್ಬ ಎಂಬ ಬೆದರಿಕೆ ಒಡ್ಡುವಂತಹ ಮೇಸೆಜ್ ಮಾಡಿರುತ್ತಾರೆ. ಪ್ರಕರಣ ಮುಂದುವರಿದಂತೆ ಅ.20 ರಂದು ಬೆಳಿಗ್ಗೆ ವ್ಯಕ್ತಿಯೋರ್ವ ತನ್ನ ಗಂಡನಿಗೆ ದೂರವಾಣಿ ಕರೆಮಾಡಿ “ನಿನ್ನ ಹೆಂಡತಿಯ ಬಗ್ಗೆ ಅವಮಾನಕಾರಿಯಾದ ಸಂದೇಶಗಳನ್ನು ಹಾಕುತ್ತೇವೆ, ಮುಂದಕ್ಕೆ ಮಹೇಶ್ ಶೆಟ್ಟಿ ಎಂಬವರ ವಿರುದ್ದವಾಗಿ ಮಾತನಾಡಬಾರದಾಗಿ ತಿಳಿಸಿ, ಜೀವ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ಉಷಾ ಶಶಿಧರ್ ಶೆಟ್ಟಿಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ದೂರನ್ನು ಸ್ವೀಕರಿಸಿದ ಪೊಲೀಸರು ಕುಮಾರಿ ಸೌಜನ್ಯ ಹೆಸರಿನ ಫೇಸ್‌ಬುಕ್ ಪೇಜ್‌ನ ಎಡ್ಮಿನ್, ರಾಧಿಕ ಕಾಸರಗೋಡು ಫೇಸ್‌ಬುಕ್ ಪೇಜ್‌ನ ಅನಿತಾ ಮತ್ತು ಬೆದರಿಕೆ ಕರೆ ಮಾಡಿದ ಮೊಬೈಲ್ ನಂಬ್ರದ ಬಳಕೆ ಮಾಡುತ್ತಿರುವ ವ್ಯಕ್ತಿಯ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ ೧೦೨/೨೦೨೩, ಕಲಂ;೩೫೪(ಂ), ೩೫೪(ಆ),೫೦೪,೫೦೬ ಐಪಿಸಿ ಯಂತೆ ಪ್ರಕರಣ. ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya
error: Content is protected !!