27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಇಳಂತಿಲ : ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟಿದ್ದು, ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಜಯಂತ ಕುಮಾರ್ ಎಂಬವರ ಮನೆಯ ಕೆಲಸಕ್ಕೆ ತೆರಳಿ ಅವರ ಮನೆಯ ಸಮೀಪದ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿದ ಅಂಗಾರು ಅವರ ಪತಿ ಸಗುಣರವರು ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ. ಅವರನ್ನು ಅಲ್ಲಿದ್ದವರು ಆರೈಕೆ ಮಾಡಿ ಬಳಿಕ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಸಗುಣರವರನ್ನು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೆಸ್ಕಾಂ ಇಲಾಖೆಯವರ ನಿರ್ಲಕ್ಷತನದಿಂದ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯ ಬಗ್ಗೆ ಯಾವುದೇ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಹಾಗೂ ಅಂಗಾರು ಮತ್ತು ಅವರ ಪತಿ ಸಗುಣರವರನ್ನು ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯಿರುವ ಸ್ಥಳದಲ್ಲಿ ಕೆಲಸಕ್ಕೆ ನೇಮಿಸಿ ಕೆಲಸ ಮಾಡಿಸಿರುವ ಬಗ್ಗೆ ಜಯಂತ ಕುಮಾರ್‌ರವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 148/2023ರಂತೆ ಕಲಂ 304(ಎ) ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya
error: Content is protected !!