23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ನಡೆದ ಕ್ರೈಸ್ತ ಪತ್ರಕರ್ತರಿಗೆ ಸಹಮಿಲನ ಮತ್ತು ಪತ್ರಿಕೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಸನ್ಮಾನ ಕಾರ್ಯಕ್ರಮವು ಜೆಪ್ಪು ಸಂತ ಅಂತೋನಿ ಆಶ್ರಮದ ಸಂಭ್ರಮ್ ಸಭಾಂಗಣದಲ್ಲಿ ಅ.22ರಂದು ನಡೆಯಿತು.

ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಕಳೆದ 24ವರ್ಷ ಸಲ್ಲಿಸಿದ ವಿಶಿಷ್ಟ ಸೇವೆಗೆ, ಬೆಳ್ತಂಗಡಿ ತಾಲೂಕಿನ ಎಲ್ಲಾ ಚರ್ಚ್ ಗಳ ವರದಿ, ವಿವಿಧ ಕಾರ್ಯಕ್ರಮಗಳ ವಿಶೇಷ ಲೇಖನದೊಂದಿಗೆ ಪುರವಣಿಗಳನ್ನು ಆಯೋಜಿಸಿ ಪತ್ರಿಕೆಯಲ್ಲಿ ಪ್ರಕಟ ಗೊಂಡಿದ್ದು, ತಾಲೂಕಿನ ವಿವಿಧ ದೇವಸ್ಥಾನಗಳ ಜಾತ್ರೆ, ಬ್ರಹ್ಮಕಲಶಕ್ಕೂ ವಿಶೇಷ ಲೇಖನ ಪುರವಣಿ ಸಂಯೋಜನೆಗೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧನೆಗಳನ್ನು ಗುರುತಿಸಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವ. ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭ ಅವರ ಪತ್ನಿ ಜ್ಯೋತಿ ಪಿಂಟೊ, ಪುತ್ರಿ ಹೇಝಲ್ ಜಿಶಾ ಪಿಂಟೊ, ಉಜಿರೆಯ ಉದ್ಯಮಿ ಪ್ರಗತಿಪರ ಕೃಷಿಕ ಅರುಣ್ ರೆಬೆಲ್ಲೊ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪ್ರಕಾಶ್ ಡಿಸೋಜಾ, ವೆಲಂಕಣಿ ಕೇಟರಿಂಗ್ ಮಾಲಕ ಲ್ಯಾನ್ಸಿ ಮೋನಿಸ್, ಉಜಿರೆ ಎಸ್ ಎ ಆಯಿಲ್ ಮಿಲ್ ಮಾಲಕ ಅರುಣ್ ಸಂದೇಶ್ ಡಿಸೋಜಾ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya
error: Content is protected !!