22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಇಳಂತಿಲ : ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟಿದ್ದು, ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಜಯಂತ ಕುಮಾರ್ ಎಂಬವರ ಮನೆಯ ಕೆಲಸಕ್ಕೆ ತೆರಳಿ ಅವರ ಮನೆಯ ಸಮೀಪದ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿದ ಅಂಗಾರು ಅವರ ಪತಿ ಸಗುಣರವರು ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ. ಅವರನ್ನು ಅಲ್ಲಿದ್ದವರು ಆರೈಕೆ ಮಾಡಿ ಬಳಿಕ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಸಗುಣರವರನ್ನು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೆಸ್ಕಾಂ ಇಲಾಖೆಯವರ ನಿರ್ಲಕ್ಷತನದಿಂದ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯ ಬಗ್ಗೆ ಯಾವುದೇ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಹಾಗೂ ಅಂಗಾರು ಮತ್ತು ಅವರ ಪತಿ ಸಗುಣರವರನ್ನು ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯಿರುವ ಸ್ಥಳದಲ್ಲಿ ಕೆಲಸಕ್ಕೆ ನೇಮಿಸಿ ಕೆಲಸ ಮಾಡಿಸಿರುವ ಬಗ್ಗೆ ಜಯಂತ ಕುಮಾರ್‌ರವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 148/2023ರಂತೆ ಕಲಂ 304(ಎ) ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya
error: Content is protected !!