25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಇಳಂತಿಲ : ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟಿದ್ದು, ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಜಯಂತ ಕುಮಾರ್ ಎಂಬವರ ಮನೆಯ ಕೆಲಸಕ್ಕೆ ತೆರಳಿ ಅವರ ಮನೆಯ ಸಮೀಪದ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿದ ಅಂಗಾರು ಅವರ ಪತಿ ಸಗುಣರವರು ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ. ಅವರನ್ನು ಅಲ್ಲಿದ್ದವರು ಆರೈಕೆ ಮಾಡಿ ಬಳಿಕ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಸಗುಣರವರನ್ನು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೆಸ್ಕಾಂ ಇಲಾಖೆಯವರ ನಿರ್ಲಕ್ಷತನದಿಂದ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯ ಬಗ್ಗೆ ಯಾವುದೇ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಹಾಗೂ ಅಂಗಾರು ಮತ್ತು ಅವರ ಪತಿ ಸಗುಣರವರನ್ನು ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯಿರುವ ಸ್ಥಳದಲ್ಲಿ ಕೆಲಸಕ್ಕೆ ನೇಮಿಸಿ ಕೆಲಸ ಮಾಡಿಸಿರುವ ಬಗ್ಗೆ ಜಯಂತ ಕುಮಾರ್‌ರವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 148/2023ರಂತೆ ಕಲಂ 304(ಎ) ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!