24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ನಡೆದ ಕ್ರೈಸ್ತ ಪತ್ರಕರ್ತರಿಗೆ ಸಹಮಿಲನ ಮತ್ತು ಪತ್ರಿಕೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಸನ್ಮಾನ ಕಾರ್ಯಕ್ರಮವು ಜೆಪ್ಪು ಸಂತ ಅಂತೋನಿ ಆಶ್ರಮದ ಸಂಭ್ರಮ್ ಸಭಾಂಗಣದಲ್ಲಿ ಅ.22ರಂದು ನಡೆಯಿತು.

ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಕಳೆದ 24ವರ್ಷ ಸಲ್ಲಿಸಿದ ವಿಶಿಷ್ಟ ಸೇವೆಗೆ, ಬೆಳ್ತಂಗಡಿ ತಾಲೂಕಿನ ಎಲ್ಲಾ ಚರ್ಚ್ ಗಳ ವರದಿ, ವಿವಿಧ ಕಾರ್ಯಕ್ರಮಗಳ ವಿಶೇಷ ಲೇಖನದೊಂದಿಗೆ ಪುರವಣಿಗಳನ್ನು ಆಯೋಜಿಸಿ ಪತ್ರಿಕೆಯಲ್ಲಿ ಪ್ರಕಟ ಗೊಂಡಿದ್ದು, ತಾಲೂಕಿನ ವಿವಿಧ ದೇವಸ್ಥಾನಗಳ ಜಾತ್ರೆ, ಬ್ರಹ್ಮಕಲಶಕ್ಕೂ ವಿಶೇಷ ಲೇಖನ ಪುರವಣಿ ಸಂಯೋಜನೆಗೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧನೆಗಳನ್ನು ಗುರುತಿಸಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವ. ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭ ಅವರ ಪತ್ನಿ ಜ್ಯೋತಿ ಪಿಂಟೊ, ಪುತ್ರಿ ಹೇಝಲ್ ಜಿಶಾ ಪಿಂಟೊ, ಉಜಿರೆಯ ಉದ್ಯಮಿ ಪ್ರಗತಿಪರ ಕೃಷಿಕ ಅರುಣ್ ರೆಬೆಲ್ಲೊ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪ್ರಕಾಶ್ ಡಿಸೋಜಾ, ವೆಲಂಕಣಿ ಕೇಟರಿಂಗ್ ಮಾಲಕ ಲ್ಯಾನ್ಸಿ ಮೋನಿಸ್, ಉಜಿರೆ ಎಸ್ ಎ ಆಯಿಲ್ ಮಿಲ್ ಮಾಲಕ ಅರುಣ್ ಸಂದೇಶ್ ಡಿಸೋಜಾ ಉಪಸ್ಥಿತರಿದ್ದರು.

Related posts

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya
error: Content is protected !!