ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ನಡೆದ ಕ್ರೈಸ್ತ ಪತ್ರಕರ್ತರಿಗೆ ಸಹಮಿಲನ ಮತ್ತು ಪತ್ರಿಕೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಸನ್ಮಾನ ಕಾರ್ಯಕ್ರಮವು ಜೆಪ್ಪು ಸಂತ ಅಂತೋನಿ ಆಶ್ರಮದ ಸಂಭ್ರಮ್ ಸಭಾಂಗಣದಲ್ಲಿ ಅ.22ರಂದು ನಡೆಯಿತು.

ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಕಳೆದ 24ವರ್ಷ ಸಲ್ಲಿಸಿದ ವಿಶಿಷ್ಟ ಸೇವೆಗೆ, ಬೆಳ್ತಂಗಡಿ ತಾಲೂಕಿನ ಎಲ್ಲಾ ಚರ್ಚ್ ಗಳ ವರದಿ, ವಿವಿಧ ಕಾರ್ಯಕ್ರಮಗಳ ವಿಶೇಷ ಲೇಖನದೊಂದಿಗೆ ಪುರವಣಿಗಳನ್ನು ಆಯೋಜಿಸಿ ಪತ್ರಿಕೆಯಲ್ಲಿ ಪ್ರಕಟ ಗೊಂಡಿದ್ದು, ತಾಲೂಕಿನ ವಿವಿಧ ದೇವಸ್ಥಾನಗಳ ಜಾತ್ರೆ, ಬ್ರಹ್ಮಕಲಶಕ್ಕೂ ವಿಶೇಷ ಲೇಖನ ಪುರವಣಿ ಸಂಯೋಜನೆಗೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧನೆಗಳನ್ನು ಗುರುತಿಸಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವ. ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭ ಅವರ ಪತ್ನಿ ಜ್ಯೋತಿ ಪಿಂಟೊ, ಪುತ್ರಿ ಹೇಝಲ್ ಜಿಶಾ ಪಿಂಟೊ, ಉಜಿರೆಯ ಉದ್ಯಮಿ ಪ್ರಗತಿಪರ ಕೃಷಿಕ ಅರುಣ್ ರೆಬೆಲ್ಲೊ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪ್ರಕಾಶ್ ಡಿಸೋಜಾ, ವೆಲಂಕಣಿ ಕೇಟರಿಂಗ್ ಮಾಲಕ ಲ್ಯಾನ್ಸಿ ಮೋನಿಸ್, ಉಜಿರೆ ಎಸ್ ಎ ಆಯಿಲ್ ಮಿಲ್ ಮಾಲಕ ಅರುಣ್ ಸಂದೇಶ್ ಡಿಸೋಜಾ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
error: Content is protected !!