July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ನಡೆದ ಕ್ರೈಸ್ತ ಪತ್ರಕರ್ತರಿಗೆ ಸಹಮಿಲನ ಮತ್ತು ಪತ್ರಿಕೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಸನ್ಮಾನ ಕಾರ್ಯಕ್ರಮವು ಜೆಪ್ಪು ಸಂತ ಅಂತೋನಿ ಆಶ್ರಮದ ಸಂಭ್ರಮ್ ಸಭಾಂಗಣದಲ್ಲಿ ಅ.22ರಂದು ನಡೆಯಿತು.

ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಕಳೆದ 24ವರ್ಷ ಸಲ್ಲಿಸಿದ ವಿಶಿಷ್ಟ ಸೇವೆಗೆ, ಬೆಳ್ತಂಗಡಿ ತಾಲೂಕಿನ ಎಲ್ಲಾ ಚರ್ಚ್ ಗಳ ವರದಿ, ವಿವಿಧ ಕಾರ್ಯಕ್ರಮಗಳ ವಿಶೇಷ ಲೇಖನದೊಂದಿಗೆ ಪುರವಣಿಗಳನ್ನು ಆಯೋಜಿಸಿ ಪತ್ರಿಕೆಯಲ್ಲಿ ಪ್ರಕಟ ಗೊಂಡಿದ್ದು, ತಾಲೂಕಿನ ವಿವಿಧ ದೇವಸ್ಥಾನಗಳ ಜಾತ್ರೆ, ಬ್ರಹ್ಮಕಲಶಕ್ಕೂ ವಿಶೇಷ ಲೇಖನ ಪುರವಣಿ ಸಂಯೋಜನೆಗೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧನೆಗಳನ್ನು ಗುರುತಿಸಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವ. ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭ ಅವರ ಪತ್ನಿ ಜ್ಯೋತಿ ಪಿಂಟೊ, ಪುತ್ರಿ ಹೇಝಲ್ ಜಿಶಾ ಪಿಂಟೊ, ಉಜಿರೆಯ ಉದ್ಯಮಿ ಪ್ರಗತಿಪರ ಕೃಷಿಕ ಅರುಣ್ ರೆಬೆಲ್ಲೊ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪ್ರಕಾಶ್ ಡಿಸೋಜಾ, ವೆಲಂಕಣಿ ಕೇಟರಿಂಗ್ ಮಾಲಕ ಲ್ಯಾನ್ಸಿ ಮೋನಿಸ್, ಉಜಿರೆ ಎಸ್ ಎ ಆಯಿಲ್ ಮಿಲ್ ಮಾಲಕ ಅರುಣ್ ಸಂದೇಶ್ ಡಿಸೋಜಾ ಉಪಸ್ಥಿತರಿದ್ದರು.

Related posts

ಮಡಂತ್ಯಾರು ನೇಸರ ಸಂಜೀವಿನಿ ಒಕ್ಕೂಟದ ಮಸಾಲಾ ಉತ್ಪನ್ನಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!