September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳ ಕೂಡುವಿಕೆಯಿಂದ ನಡೆಯುವ ಬೆರ್ಮೆರ್ ಬೈದೆರ್ಲೆ ಗರಡಿ ಇದರ 2023 -24 ನೇ ಸಾಲಿನ ವಾರ್ಷಿಕ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ಲಾಲು ಗರಡಿ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗರಡಿಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು ವಹಿಸಿ ಮಾತನಾಡಿ ಜಾತ್ರಾಮಹೋತ್ಸವದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ 2023-24 ನೇ ಸಾಲಿನ ಜಾತ್ರಾ ಸಮಿತಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಪೂಜಾರಿ, ಆಡಳಿತ ಮಂಡಳಿಯ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಬಿಲ್ಲವ ಜಂಟಿ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಗರಡಿ ಭಕ್ತರು ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಎಂ.ಕೆ ಸ್ವಾಗತಿಸಿ ವಂದಿಸಿದರು.

Related posts

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya
error: Content is protected !!