38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ರಜತಪರ್ವ ಸರಣಿಯ ಅಂಗವಾಗಿ ಯಕ್ಷದೀವಿಗೆ ತುಮಕೂರು ಇವರ ಸಹಯೋಗದಲ್ಲಿ ಅ. 25 ರಂದು ಸಂಜೆ 4-30ರಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ, ನಿಡ್ಲೆ ಇಲ್ಲಿ ಕೃತಿ ಲೋಕಾರ್ಪಣೆ ಹಾಗೂ ತಾಳಮದ್ದಳೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ 40 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕಡಂಬಿಲ ಭೀಮ ಭಟ್ಟರ ಜೀವನಕಥನ ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ (ನಿರೂಪಣೆ: ಆರತಿ ಪಟ್ರಮೆ) ಕೃತಿಯನ್ನು ಬಹುಶ್ರುತ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಶಿ ಅನಾವರಣಗೊಳಿಸಲಿದ್ದಾರೆ.

ಕೃತಿಕಾರ ಭೀಮ ಭಟ್ ಈ ಸಂದರ್ಭ ಉಪಸ್ಥಿತರಿರುವರು.

ಕಾರ್ಯಕ್ರಮದ ಅಂಗವಾಗಿ ‘ಸ್ಯಮಂತಕಮಣಿ’ ಎಂಬ ಯಕ್ಷಗಾನ ತಾಳಮದ್ದಳೆ ಜರುಗಲಿರುವುದು. ಹಿಮ್ಮೇಳದಲ್ಲಿ ಭಾಗವತರಾಗಿ ಮತ್ತೂರು ರಮೇಶ ಭಟ್, ಬಿ. ಜನಾರ್ದನ ತೋಳಾಡಿತ್ತಾಯ, ಪಿ. ಜಿ. ಜಗನ್ನಿವಾಸರಾವ್ ಪುತ್ತೂರು ಹಾಗೂ ಮಾ ಸಂವೃತ ಶರ್ಮಾ ಭಾಗವಹಿಸಲಿದ್ದಾರೆ. ಮುಮ್ಮೇಳದಲ್ಲಿ ಡಾ. ಎಂ. ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್, ಡಾ. ಸಿಬಂತಿ ಪದ್ಮನಾಭ ಕೆ.ವಿ. ಹಾಗೂ ಆರತಿ ಪಟ್ರಮೆ ಪಾತ್ರನಿರ್ವಹಿಸಲಿದ್ದಾರೆ.

ಆಸಕ್ತ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕರಾದ ಉಜಿರೆ ಅಶೋಕ ಭಟ್ ಹಾಗೂ ಕಾರ್ಯಕ್ರಮದ ಸಂಯೋಜಕರಾದ ವಿಷ್ಣು ಮರಾಠ ನಿಡ್ಲೆ ತಿಳಿಸಿದ್ದಾರೆ.

Related posts

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!