25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ರಜತಪರ್ವ ಸರಣಿಯ ಅಂಗವಾಗಿ ಯಕ್ಷದೀವಿಗೆ ತುಮಕೂರು ಇವರ ಸಹಯೋಗದಲ್ಲಿ ಅ. 25 ರಂದು ಸಂಜೆ 4-30ರಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ, ನಿಡ್ಲೆ ಇಲ್ಲಿ ಕೃತಿ ಲೋಕಾರ್ಪಣೆ ಹಾಗೂ ತಾಳಮದ್ದಳೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ 40 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕಡಂಬಿಲ ಭೀಮ ಭಟ್ಟರ ಜೀವನಕಥನ ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ (ನಿರೂಪಣೆ: ಆರತಿ ಪಟ್ರಮೆ) ಕೃತಿಯನ್ನು ಬಹುಶ್ರುತ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಶಿ ಅನಾವರಣಗೊಳಿಸಲಿದ್ದಾರೆ.

ಕೃತಿಕಾರ ಭೀಮ ಭಟ್ ಈ ಸಂದರ್ಭ ಉಪಸ್ಥಿತರಿರುವರು.

ಕಾರ್ಯಕ್ರಮದ ಅಂಗವಾಗಿ ‘ಸ್ಯಮಂತಕಮಣಿ’ ಎಂಬ ಯಕ್ಷಗಾನ ತಾಳಮದ್ದಳೆ ಜರುಗಲಿರುವುದು. ಹಿಮ್ಮೇಳದಲ್ಲಿ ಭಾಗವತರಾಗಿ ಮತ್ತೂರು ರಮೇಶ ಭಟ್, ಬಿ. ಜನಾರ್ದನ ತೋಳಾಡಿತ್ತಾಯ, ಪಿ. ಜಿ. ಜಗನ್ನಿವಾಸರಾವ್ ಪುತ್ತೂರು ಹಾಗೂ ಮಾ ಸಂವೃತ ಶರ್ಮಾ ಭಾಗವಹಿಸಲಿದ್ದಾರೆ. ಮುಮ್ಮೇಳದಲ್ಲಿ ಡಾ. ಎಂ. ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್, ಡಾ. ಸಿಬಂತಿ ಪದ್ಮನಾಭ ಕೆ.ವಿ. ಹಾಗೂ ಆರತಿ ಪಟ್ರಮೆ ಪಾತ್ರನಿರ್ವಹಿಸಲಿದ್ದಾರೆ.

ಆಸಕ್ತ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕರಾದ ಉಜಿರೆ ಅಶೋಕ ಭಟ್ ಹಾಗೂ ಕಾರ್ಯಕ್ರಮದ ಸಂಯೋಜಕರಾದ ವಿಷ್ಣು ಮರಾಠ ನಿಡ್ಲೆ ತಿಳಿಸಿದ್ದಾರೆ.

Related posts

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!