22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ರಜತಪರ್ವ ಸರಣಿಯ ಅಂಗವಾಗಿ ಯಕ್ಷದೀವಿಗೆ ತುಮಕೂರು ಇವರ ಸಹಯೋಗದಲ್ಲಿ ಅ. 25 ರಂದು ಸಂಜೆ 4-30ರಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ, ನಿಡ್ಲೆ ಇಲ್ಲಿ ಕೃತಿ ಲೋಕಾರ್ಪಣೆ ಹಾಗೂ ತಾಳಮದ್ದಳೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ 40 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕಡಂಬಿಲ ಭೀಮ ಭಟ್ಟರ ಜೀವನಕಥನ ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ (ನಿರೂಪಣೆ: ಆರತಿ ಪಟ್ರಮೆ) ಕೃತಿಯನ್ನು ಬಹುಶ್ರುತ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಶಿ ಅನಾವರಣಗೊಳಿಸಲಿದ್ದಾರೆ.

ಕೃತಿಕಾರ ಭೀಮ ಭಟ್ ಈ ಸಂದರ್ಭ ಉಪಸ್ಥಿತರಿರುವರು.

ಕಾರ್ಯಕ್ರಮದ ಅಂಗವಾಗಿ ‘ಸ್ಯಮಂತಕಮಣಿ’ ಎಂಬ ಯಕ್ಷಗಾನ ತಾಳಮದ್ದಳೆ ಜರುಗಲಿರುವುದು. ಹಿಮ್ಮೇಳದಲ್ಲಿ ಭಾಗವತರಾಗಿ ಮತ್ತೂರು ರಮೇಶ ಭಟ್, ಬಿ. ಜನಾರ್ದನ ತೋಳಾಡಿತ್ತಾಯ, ಪಿ. ಜಿ. ಜಗನ್ನಿವಾಸರಾವ್ ಪುತ್ತೂರು ಹಾಗೂ ಮಾ ಸಂವೃತ ಶರ್ಮಾ ಭಾಗವಹಿಸಲಿದ್ದಾರೆ. ಮುಮ್ಮೇಳದಲ್ಲಿ ಡಾ. ಎಂ. ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್, ಡಾ. ಸಿಬಂತಿ ಪದ್ಮನಾಭ ಕೆ.ವಿ. ಹಾಗೂ ಆರತಿ ಪಟ್ರಮೆ ಪಾತ್ರನಿರ್ವಹಿಸಲಿದ್ದಾರೆ.

ಆಸಕ್ತ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕರಾದ ಉಜಿರೆ ಅಶೋಕ ಭಟ್ ಹಾಗೂ ಕಾರ್ಯಕ್ರಮದ ಸಂಯೋಜಕರಾದ ವಿಷ್ಣು ಮರಾಠ ನಿಡ್ಲೆ ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya
error: Content is protected !!