24.7 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಇಳಂತಿಲ : ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟಿದ್ದು, ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಜಯಂತ ಕುಮಾರ್ ಎಂಬವರ ಮನೆಯ ಕೆಲಸಕ್ಕೆ ತೆರಳಿ ಅವರ ಮನೆಯ ಸಮೀಪದ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿದ ಅಂಗಾರು ಅವರ ಪತಿ ಸಗುಣರವರು ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ. ಅವರನ್ನು ಅಲ್ಲಿದ್ದವರು ಆರೈಕೆ ಮಾಡಿ ಬಳಿಕ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಸಗುಣರವರನ್ನು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೆಸ್ಕಾಂ ಇಲಾಖೆಯವರ ನಿರ್ಲಕ್ಷತನದಿಂದ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯ ಬಗ್ಗೆ ಯಾವುದೇ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಹಾಗೂ ಅಂಗಾರು ಮತ್ತು ಅವರ ಪತಿ ಸಗುಣರವರನ್ನು ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯಿರುವ ಸ್ಥಳದಲ್ಲಿ ಕೆಲಸಕ್ಕೆ ನೇಮಿಸಿ ಕೆಲಸ ಮಾಡಿಸಿರುವ ಬಗ್ಗೆ ಜಯಂತ ಕುಮಾರ್‌ರವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 148/2023ರಂತೆ ಕಲಂ 304(ಎ) ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya
error: Content is protected !!