23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ನಡೆದ ಕ್ರೈಸ್ತ ಪತ್ರಕರ್ತರಿಗೆ ಸಹಮಿಲನ ಮತ್ತು ಪತ್ರಿಕೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಸನ್ಮಾನ ಕಾರ್ಯಕ್ರಮವು ಜೆಪ್ಪು ಸಂತ ಅಂತೋನಿ ಆಶ್ರಮದ ಸಂಭ್ರಮ್ ಸಭಾಂಗಣದಲ್ಲಿ ಅ.22ರಂದು ನಡೆಯಿತು.

ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಕಳೆದ 24ವರ್ಷ ಸಲ್ಲಿಸಿದ ವಿಶಿಷ್ಟ ಸೇವೆಗೆ, ಬೆಳ್ತಂಗಡಿ ತಾಲೂಕಿನ ಎಲ್ಲಾ ಚರ್ಚ್ ಗಳ ವರದಿ, ವಿವಿಧ ಕಾರ್ಯಕ್ರಮಗಳ ವಿಶೇಷ ಲೇಖನದೊಂದಿಗೆ ಪುರವಣಿಗಳನ್ನು ಆಯೋಜಿಸಿ ಪತ್ರಿಕೆಯಲ್ಲಿ ಪ್ರಕಟ ಗೊಂಡಿದ್ದು, ತಾಲೂಕಿನ ವಿವಿಧ ದೇವಸ್ಥಾನಗಳ ಜಾತ್ರೆ, ಬ್ರಹ್ಮಕಲಶಕ್ಕೂ ವಿಶೇಷ ಲೇಖನ ಪುರವಣಿ ಸಂಯೋಜನೆಗೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧನೆಗಳನ್ನು ಗುರುತಿಸಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವ. ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭ ಅವರ ಪತ್ನಿ ಜ್ಯೋತಿ ಪಿಂಟೊ, ಪುತ್ರಿ ಹೇಝಲ್ ಜಿಶಾ ಪಿಂಟೊ, ಉಜಿರೆಯ ಉದ್ಯಮಿ ಪ್ರಗತಿಪರ ಕೃಷಿಕ ಅರುಣ್ ರೆಬೆಲ್ಲೊ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪ್ರಕಾಶ್ ಡಿಸೋಜಾ, ವೆಲಂಕಣಿ ಕೇಟರಿಂಗ್ ಮಾಲಕ ಲ್ಯಾನ್ಸಿ ಮೋನಿಸ್, ಉಜಿರೆ ಎಸ್ ಎ ಆಯಿಲ್ ಮಿಲ್ ಮಾಲಕ ಅರುಣ್ ಸಂದೇಶ್ ಡಿಸೋಜಾ ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya
error: Content is protected !!