23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ನಡೆದ ಕ್ರೈಸ್ತ ಪತ್ರಕರ್ತರಿಗೆ ಸಹಮಿಲನ ಮತ್ತು ಪತ್ರಿಕೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಸನ್ಮಾನ ಕಾರ್ಯಕ್ರಮವು ಜೆಪ್ಪು ಸಂತ ಅಂತೋನಿ ಆಶ್ರಮದ ಸಂಭ್ರಮ್ ಸಭಾಂಗಣದಲ್ಲಿ ಅ.22ರಂದು ನಡೆಯಿತು.

ಬೆಳ್ತಂಗಡಿ ವಾರ ಪತ್ರಿಕೆಯ ವರದಿಗಾರ ಹೆರಾಲ್ಡ್ ಪಿಂಟೊ ಕಳೆದ 24ವರ್ಷ ಸಲ್ಲಿಸಿದ ವಿಶಿಷ್ಟ ಸೇವೆಗೆ, ಬೆಳ್ತಂಗಡಿ ತಾಲೂಕಿನ ಎಲ್ಲಾ ಚರ್ಚ್ ಗಳ ವರದಿ, ವಿವಿಧ ಕಾರ್ಯಕ್ರಮಗಳ ವಿಶೇಷ ಲೇಖನದೊಂದಿಗೆ ಪುರವಣಿಗಳನ್ನು ಆಯೋಜಿಸಿ ಪತ್ರಿಕೆಯಲ್ಲಿ ಪ್ರಕಟ ಗೊಂಡಿದ್ದು, ತಾಲೂಕಿನ ವಿವಿಧ ದೇವಸ್ಥಾನಗಳ ಜಾತ್ರೆ, ಬ್ರಹ್ಮಕಲಶಕ್ಕೂ ವಿಶೇಷ ಲೇಖನ ಪುರವಣಿ ಸಂಯೋಜನೆಗೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧನೆಗಳನ್ನು ಗುರುತಿಸಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವ. ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭ ಅವರ ಪತ್ನಿ ಜ್ಯೋತಿ ಪಿಂಟೊ, ಪುತ್ರಿ ಹೇಝಲ್ ಜಿಶಾ ಪಿಂಟೊ, ಉಜಿರೆಯ ಉದ್ಯಮಿ ಪ್ರಗತಿಪರ ಕೃಷಿಕ ಅರುಣ್ ರೆಬೆಲ್ಲೊ, ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪ್ರಕಾಶ್ ಡಿಸೋಜಾ, ವೆಲಂಕಣಿ ಕೇಟರಿಂಗ್ ಮಾಲಕ ಲ್ಯಾನ್ಸಿ ಮೋನಿಸ್, ಉಜಿರೆ ಎಸ್ ಎ ಆಯಿಲ್ ಮಿಲ್ ಮಾಲಕ ಅರುಣ್ ಸಂದೇಶ್ ಡಿಸೋಜಾ ಉಪಸ್ಥಿತರಿದ್ದರು.

Related posts

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!