September 6, 2026
ಗ್ರಾಮಾಂತರ ಸುದ್ದಿ

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಮಧ್ವ ಯಕ್ಷಕೂಟದ ವತಿಯಿ.ದ ಯಕ್ಷಾಭಿಮಾನಿಗಳು ಮಾಲಾಡಿ, ಸೋಣಂದೂರು ಇದರ ಸಹಕಾರದಲ್ಲಿ ನವರಾತ್ರಿ ಪ್ರಯುಕ್ತ  ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ   ಕೊಲ್ಪೆದಬಯಿಲ್ ಎಸ್‌ಕೆಎಸ್ ಸಭಾಂಗಣದಲ್ಲಿ ನಡೆಯಿತು.
ಪಾರೆಂಕಿ ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಕಾರ್ಯಾಧ್ಯಕ್ಷ ಡಾ. ಸುಬ್ರಹ್ಮಣ್ಯ ಬಲ್ಲಾಳ್  ಅವರು ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿ, ಯಕ್ಷಗಾನದ ಮೂಲಕ ನಮ್ಮ ಸಂಸ್ಕೃತಿ, ಪುರಾಣ ಜ್ಞಾನ ತಿಳಿಯುತ್ತದೆ. ಮಧ್ವಾಚಾರ್ಯರಿಂದ ಸ್ಥಾಪಿಸಲ್ಪಟ್ಟ ಕರಾವಳಿಯ ಗಂಡು ಕಲೆಯಾದ ಯಕ್ಷಗಾನ ಜಗತ್ತಿನೆಲ್ಲೆಡೆ ಪಸರಿಸಿದ್ದು, ಯಕ್ಷಗಾನಕ್ಕೆ ಎಲ್ಲರೂ ಪ್ರೋತ್ಸಾಹ ನೀಡಬೇಕು ಎಂದರು.
ಶ್ರೀ ಕ್ಷೇತ್ರ ಪಾರೆಂಕಿಯ ಮಾಜಿ ಆಡಳಿತ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ಮೂಡಾಯೂರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರಂತರ ತಾಳಮದ್ದಳೆ ನಡೆಸುವ ಯಕ್ಷಕೂಟದ ಭಾಸ್ಕರ ಶೆಟ್ಟಿ ಅವರ ಶ್ರಮ ಅಭಿನಂದಾರ್ಹ, ಯುವ ಜನತೆ ಯಕ್ಷಗಾನದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಪ್ರಗತಿಪರ ಕೃಷಿಕ ಮೂಡಾಯೂರು ಸಂಜೀವ ಶೆಟ್ಟಿ, ನಿವೃತ್ತ ಸೈನಿಕ ಕಾಂತಪ್ಪ ಗೌಡ ಹಟತ್ತೋಡಿ, ಮಾಲಾಡಿ ವೇಣೂರು ಗ್ರಾಮ ಆಡಳಿತಾಽಕಾರಿ ಉಮೇಶ್, ಗತಿಪರ ಕೃಷಿಕ ಚಂದ್ರಶೇಖರ ಅಜಿಲ ಸೋಣಂದೂರು ಮತ್ತಿತರರು ಉಪಸ್ಥಿತರಿದ್ದರು.
ಯಕ್ಷ ಕೂಟ ಅಧ್ಯಕ್ಷ ಭಾಸ್ಕರ ಶೆಟ್ಟಿ  ಸ್ವಾಗತಿಸಿ, ಪ್ರಸ್ತಾವಿಸಿದರು. ಜನಾರ್ದನ ಶೆಟ್ಟಿ ವಂದಿಸಿದರು. ರವಿಶಂಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ    ಶ್ರೀ ಚೂಡಾಮಣಿ ಯಕ್ಷಗಾನ ತಾಳಮದ್ದಳೆ ನಡೆಯಿತು. ಭಾಗವತರು ರವಿಚಂದ್ರ ಕನ್ನಡಿಕಟ್ಟೆ ಮತ್ತು ವಿಶ್ವಾಸ್ ಭಟ್,  ಮದ್ದಳೆಯಲ್ಲಿ ಗಣೇಶ್ ಬೆಳಾಲು  ಮತ್ತು ನವೀನ್ ಚಂದ್ರ ಮೊರ್ಗನಾಡು, ಮೊದಲನೇ ಹನುಮಂತನಾಗಿ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ತೃಣಬಿಂದು, ಸರಮೆ ಚಂದ್ರಶೇಖರ ಅಜಿಲ ಸೋಣಂದೂರು, ಎರಡನೇ ಹನುಮಂತನಾಗಿ ಶ್ರೀಮತಿ ಸಾಯಿಸುಮ ಎಂ. ನಾವಡ ಕಾರಿಂಜ,ರಾವಣ  ಡಿ. ಪಾತಿಲ ತಿಮ್ಮಪ್ಪ ಶೆಟ್ಟಿ, ಸೀತೆಯಾಗಿ  ಶ್ರೀಮತಿ ಜ್ಯೋತಿ ಶೈಲೇಶ್ ಅತ್ಯುತ್ತಮವಾಗಿ ಪಾತ್ರ ನಿವ೯ಹಿಸಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

Related posts

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya
error: Content is protected !!