25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳ ಕೂಡುವಿಕೆಯಿಂದ ನಡೆಯುವ ಬೆರ್ಮೆರ್ ಬೈದೆರ್ಲೆ ಗರಡಿ ಇದರ 2023 -24 ನೇ ಸಾಲಿನ ವಾರ್ಷಿಕ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ಲಾಲು ಗರಡಿ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗರಡಿಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು ವಹಿಸಿ ಮಾತನಾಡಿ ಜಾತ್ರಾಮಹೋತ್ಸವದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ 2023-24 ನೇ ಸಾಲಿನ ಜಾತ್ರಾ ಸಮಿತಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಪೂಜಾರಿ, ಆಡಳಿತ ಮಂಡಳಿಯ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಬಿಲ್ಲವ ಜಂಟಿ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಗರಡಿ ಭಕ್ತರು ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಎಂ.ಕೆ ಸ್ವಾಗತಿಸಿ ವಂದಿಸಿದರು.

Related posts

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya
error: Content is protected !!