27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

ಬಾರ್ಯ : ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅ.24 ವಿಜಯದಶಮಿಯಂದು ವಾಹನ ಪೂಜೆ ಹಾಗೂ ಮಹಾವಿಷ್ಣು ದೇವರ ವಿಶೇಷ ಪೂಜೆ ನಡೆದು ಭಾಸ್ಕರ್ ಬಾರ್ಯರವರು ಒಳಿತಿಗಾಗಿ ಪ್ರಾರ್ಥಿಸಿದರು. ನಂತರ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ ಜರಗಿತು.

ಬೈಲುವಾರು ಸಮಿತಿಯನ್ನು ಮತ್ತಷ್ಟು ಸಕ್ರಿಯಗೊಳಿಸಿ ಚುರುಕಾಗಿಸಿ ದೇವಸ್ಥಾನದ ಅಭಿವೃದ್ಧಿಗೆ ತೊಡಗಿಸಿಕೊಂಡು ಸದಾ ಕ್ರಿಯಾಶೀಲವಾಗಿರುವಂತೆ ಹಾಗೂ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ತೋಡಗಿಸಿಕೊಳ್ಳುವುದು ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಟ್ರಸ್ಟ್ ಪ್ರಮುಖರ ಯೋಜನೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವ ಎಲ್ಲಾ ಬೈಲುವಾರು ಸಮಿತಿಯ ಭಕ್ತರಿಗೆ ಸೇಸಪ್ಪ ಸಾಲ್ಯಾನ್ ಬಾರ್ಯ ಕೃತಜ್ಞತೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುಂದರ ನುರಿತ್ತಾಯ ಮುಂದಿನ ಅಭಿವೃದ್ಧಿ ಯೋಜನೆ ಬಗ್ಗೆ ತಿಳಿಸಿ ಸರ್ವರ ಸಹಕಾರ ಯಾಚಿಸಿದರು.

ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಪರ್ಂದ ಗುತ್ತು, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಟ್ರಸ್ಟಿ ರಾಜೇಶ್ ರಾವ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮನೋಹರ್ ಶೆಟ್ಟಿ ಬಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಿಯ ಹರಕೆ ಸೀರೆ ಹರಾಜು ಮಾಡಲಾಯಿತು.

Related posts

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya
error: Content is protected !!