September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

ಬಾರ್ಯ : ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅ.24 ವಿಜಯದಶಮಿಯಂದು ವಾಹನ ಪೂಜೆ ಹಾಗೂ ಮಹಾವಿಷ್ಣು ದೇವರ ವಿಶೇಷ ಪೂಜೆ ನಡೆದು ಭಾಸ್ಕರ್ ಬಾರ್ಯರವರು ಒಳಿತಿಗಾಗಿ ಪ್ರಾರ್ಥಿಸಿದರು. ನಂತರ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ ಜರಗಿತು.

ಬೈಲುವಾರು ಸಮಿತಿಯನ್ನು ಮತ್ತಷ್ಟು ಸಕ್ರಿಯಗೊಳಿಸಿ ಚುರುಕಾಗಿಸಿ ದೇವಸ್ಥಾನದ ಅಭಿವೃದ್ಧಿಗೆ ತೊಡಗಿಸಿಕೊಂಡು ಸದಾ ಕ್ರಿಯಾಶೀಲವಾಗಿರುವಂತೆ ಹಾಗೂ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ತೋಡಗಿಸಿಕೊಳ್ಳುವುದು ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಟ್ರಸ್ಟ್ ಪ್ರಮುಖರ ಯೋಜನೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವ ಎಲ್ಲಾ ಬೈಲುವಾರು ಸಮಿತಿಯ ಭಕ್ತರಿಗೆ ಸೇಸಪ್ಪ ಸಾಲ್ಯಾನ್ ಬಾರ್ಯ ಕೃತಜ್ಞತೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುಂದರ ನುರಿತ್ತಾಯ ಮುಂದಿನ ಅಭಿವೃದ್ಧಿ ಯೋಜನೆ ಬಗ್ಗೆ ತಿಳಿಸಿ ಸರ್ವರ ಸಹಕಾರ ಯಾಚಿಸಿದರು.

ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಪರ್ಂದ ಗುತ್ತು, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಟ್ರಸ್ಟಿ ರಾಜೇಶ್ ರಾವ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮನೋಹರ್ ಶೆಟ್ಟಿ ಬಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಿಯ ಹರಕೆ ಸೀರೆ ಹರಾಜು ಮಾಡಲಾಯಿತು.

Related posts

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya
error: Content is protected !!