ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಗೇರುಕಟ್ಟೆ: ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಗೇರುಕಟ್ಟೆ, ಇದರ ರಜತ ಮಹೋತ್ಸವದ ಪ್ರಯುಕ್ತ ಶಕ್ತಿ ಯುವಕಮಂಡಲ ಮತ್ತು ಮಹಾದಾನಿಗಳ ಸಹಕಾರದೊಂದಿಗೆ ಬಡ ಕುಟುಂಬದ ಶ್ರೀಮತಿ ಸೀತಾ ಇವರಿಗೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆಯನ್ನು ಅ. 24 ರಂದು ನಡುಮನೆ ಶ್ರೀನಿವಾಸ ಪುರೋಹಿತರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿನ ಅಧ್ಯಕ್ಷ ದಿವಾಕರ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಶಕ್ತಿ ಯುವಕಮಂಡಲದ ಅಧ್ಯಕ್ಷ ಉಮೇಶ್ ಕುಲಾಲ್, ಕುವೆಟ್ಟು ಗ್ರಾಮ ಪಂಚಾಯಿತಿನ ಸದಸ್ಯರಾದ ಸದಾನಂದ ಮೂಲ್ಯ, ಪ್ರಧಾನ ಕಾರ್ಯದರ್ಶಿಯಾದ ತಾರಾನಾಥ ನಾಯ್ಕ್, ಕಾರ್ಯದರ್ಶಿಯಾದ ಸಂತೋಷ ಭಾರ್ಗವಿ, ಕ್ರೀಡೆ ಕಾರ್ಯದರ್ಶಿಯಾದ ಸುದೇಶ್ ಆರ್ ಗೌಡ, ಮಾಧ್ಯಮ ಕಾರ್ಯದರ್ಶಿಯಾದ ಸತೀಶ್ ಸಾಲಿಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾದ ಯೋಗೀಶ್ ಕುಮಾರ್, ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ದೇವಣ್ಣ ಮೂಲ್ಯ, ಕಳಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ , ಸಿರಿಲ್ ಪಿಂಟೋ ಹಾಗೂ ಶಕ್ತಿ ಯುವಕಮಂಡಲದ ಪದಾಧಿಕಾರಿಗಳು, ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

Leave a Comment

error: Content is protected !!