26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

ಗೇರುಕಟ್ಟೆ: ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಗೇರುಕಟ್ಟೆ, ಇದರ ರಜತ ಮಹೋತ್ಸವದ ಪ್ರಯುಕ್ತ ಶಕ್ತಿ ಯುವಕಮಂಡಲ ಮತ್ತು ಮಹಾದಾನಿಗಳ ಸಹಕಾರದೊಂದಿಗೆ ಬಡ ಕುಟುಂಬದ ಶ್ರೀಮತಿ ಸೀತಾ ಇವರಿಗೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆಯನ್ನು ಅ. 24 ರಂದು ನಡುಮನೆ ಶ್ರೀನಿವಾಸ ಪುರೋಹಿತರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿನ ಅಧ್ಯಕ್ಷ ದಿವಾಕರ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಶಕ್ತಿ ಯುವಕಮಂಡಲದ ಅಧ್ಯಕ್ಷ ಉಮೇಶ್ ಕುಲಾಲ್, ಕುವೆಟ್ಟು ಗ್ರಾಮ ಪಂಚಾಯಿತಿನ ಸದಸ್ಯರಾದ ಸದಾನಂದ ಮೂಲ್ಯ, ಪ್ರಧಾನ ಕಾರ್ಯದರ್ಶಿಯಾದ ತಾರಾನಾಥ ನಾಯ್ಕ್, ಕಾರ್ಯದರ್ಶಿಯಾದ ಸಂತೋಷ ಭಾರ್ಗವಿ, ಕ್ರೀಡೆ ಕಾರ್ಯದರ್ಶಿಯಾದ ಸುದೇಶ್ ಆರ್ ಗೌಡ, ಮಾಧ್ಯಮ ಕಾರ್ಯದರ್ಶಿಯಾದ ಸತೀಶ್ ಸಾಲಿಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾದ ಯೋಗೀಶ್ ಕುಮಾರ್, ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ದೇವಣ್ಣ ಮೂಲ್ಯ, ಕಳಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ , ಸಿರಿಲ್ ಪಿಂಟೋ ಹಾಗೂ ಶಕ್ತಿ ಯುವಕಮಂಡಲದ ಪದಾಧಿಕಾರಿಗಳು, ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya
error: Content is protected !!