ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೊದಲ ಕಾದಂಬರಿ “ಶಂಭು” ವನ್ನು ವಿಜಯದಶಮಿಯ ಶುಭ ದಿನದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಬರೆಯಲು ಸ್ಪೂರ್ತಿ ನೀಡಿದ ಸುಬ್ರಹ್ಮಣ್ಯ ಭಟ್ಟರ ಧರ್ಮಪತ್ನಿ ಭವ್ಯ ಜಿ.ಜಿ. , ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ರವರು ಉಪಸ್ಥಿತರಿದ್ದರು.

Leave a Comment

error: Content is protected !!