25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

ಬಾರ್ಯ : ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅ.24 ವಿಜಯದಶಮಿಯಂದು ವಾಹನ ಪೂಜೆ ಹಾಗೂ ಮಹಾವಿಷ್ಣು ದೇವರ ವಿಶೇಷ ಪೂಜೆ ನಡೆದು ಭಾಸ್ಕರ್ ಬಾರ್ಯರವರು ಒಳಿತಿಗಾಗಿ ಪ್ರಾರ್ಥಿಸಿದರು. ನಂತರ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ ಜರಗಿತು.

ಬೈಲುವಾರು ಸಮಿತಿಯನ್ನು ಮತ್ತಷ್ಟು ಸಕ್ರಿಯಗೊಳಿಸಿ ಚುರುಕಾಗಿಸಿ ದೇವಸ್ಥಾನದ ಅಭಿವೃದ್ಧಿಗೆ ತೊಡಗಿಸಿಕೊಂಡು ಸದಾ ಕ್ರಿಯಾಶೀಲವಾಗಿರುವಂತೆ ಹಾಗೂ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ತೋಡಗಿಸಿಕೊಳ್ಳುವುದು ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಟ್ರಸ್ಟ್ ಪ್ರಮುಖರ ಯೋಜನೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವ ಎಲ್ಲಾ ಬೈಲುವಾರು ಸಮಿತಿಯ ಭಕ್ತರಿಗೆ ಸೇಸಪ್ಪ ಸಾಲ್ಯಾನ್ ಬಾರ್ಯ ಕೃತಜ್ಞತೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುಂದರ ನುರಿತ್ತಾಯ ಮುಂದಿನ ಅಭಿವೃದ್ಧಿ ಯೋಜನೆ ಬಗ್ಗೆ ತಿಳಿಸಿ ಸರ್ವರ ಸಹಕಾರ ಯಾಚಿಸಿದರು.

ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಪರ್ಂದ ಗುತ್ತು, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಟ್ರಸ್ಟಿ ರಾಜೇಶ್ ರಾವ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮನೋಹರ್ ಶೆಟ್ಟಿ ಬಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಿಯ ಹರಕೆ ಸೀರೆ ಹರಾಜು ಮಾಡಲಾಯಿತು.

Related posts

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya
error: Content is protected !!