25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

ಬೆಳ್ತಂಗಡಿ: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಡ್ರೀಮ್ ಡೀಲ್ ಗ್ರೂಪ್ ನ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ನಗರ ಪಂಚಾಯತ್ ಬಿಲ್ಡಿಂಗ್ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಿತು.

ನೂತನ ಡಿಡಿ ಗ್ರೂಪ್ ನ್ನು ಬೆಳ್ತಂಗಡಿ ಚರ್ಚ್ ನ ಧರ್ಮಗುರುಗಳಾದ ರೇ.ಫಾ| ಕ್ಲಿಪರ್ಡ್ ಸೈಮನ್ ಪಿಂಟೋ ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷ ಬಿ.ಎ ನಝೀರ್, ನ್ಯಾಯವಾದಿ ಶಶಿಕಿರಣ್ ಜೈನ್ ಬೆಳ್ತಂಗಡಿ, ಡಿಡಿ ಗ್ರೂಪ್ಸ್ ಆಡಳಿತ ನಿರ್ದೇಶಕ ಸುಹೇಲ್, ಮೊಬೈಲ್ ಪ್ಯಾಲೇಸ್ ಮಾಲಕ ಉಮೇಶ್ ಪೂಜಾರಿ ಉಪಸ್ಥಿತರಿದ್ದು ಶುಭಕೋರಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಇಮ್ತಿಯಾಜ್ ಬೆಳ್ತಂಗಡಿ, ಸುಹೇಲ್ ಸಮಕ್ ಡೈನ್ ಬೆಳ್ತಂಗಡಿ, ಕಿಶಾನ್ ಭಟ್ ಕಟೀಲು,ಬದ್ರುದ್ದೀನ್ ಶಾಜ್ ಕಲೆಕ್ಷನ್ ಬೆಳ್ತಂಗಡಿ,ನಿತೇಶ್ ಎಸ್.ವಿ ಮೊಬೈಲ್ ಬೆಳ್ತಂಗಡಿ, ನಿಜಾಮ್ ರೋಯಲ್ ಝೋನ್ ಬೆಳ್ತಂಗಡಿ, ಪುತ್ತ ಬೆಳ್ತಂಗಡಿ ಹಾಗೂ ಇತರರು ಉಪಸ್ಥಿತರಿದ್ದು ಶುಭಕೋರಿದರು.

ರಾಯಲ್ ಝೋನ್ ಮಾಲಕ, ನಿರೂಪಕ ಮಹಮ್ಮದ್ ನಿಸಾರ್ ಸ್ವಾಗತಿಸಿ, ವಂದಿಸಿದರು. ಸಂಸ್ಥೆಯ ಪಾಲುದಾರರು ಅತಿಥಿ ಗಣ್ಯರನ್ನು ಸತ್ಕರಿಸಿದರು.

ಡಿಡಿ ಗ್ರೂಪ್ಸ್ ಸಂಸ್ಥೆಯು ಲಕ್ಕಿ ಸ್ಕೀಮ್ ನ್ನು ಮಾಡುತ್ತಿದ್ದು ರಾಜ್ಯಾದ್ಯಂತ ಹಲವಾರು ಶಾಖೆಗಳನ್ನು ತೆರದಿದ್ದಾರೆ. ತಿಂಗಳಿಗೆ ಒಂದು ಸಾವಿರದಂತೆ 20 ಕಂತು ಪಾವತಿಸಲು ಅವಕಾಶವಿದೆ. ಲಕ್ಕಿ ಡ್ರಾದಲ್ಲಿ ವಿಜೇತರಿಗೆ ಕಾರು, ದ್ವಿಚಕ್ರ ವಾಹನ, ಬಂಗಾರ, ಎಲೆಕ್ಟ್ರಾನಿಕ್ ಮುಂತಾದ ವಸ್ತುಗಳು ಸಿಗುತ್ತದೆ. ಕಂತು ಪಾವತಿಸಿ ಯಾವುದೇ ಬಹುಮಾನ ಬಾರದಿದ್ದರು ಕಟ್ಟಿದ ಮೊತ್ತದ ತಮಗೆ ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕರು ತಿಳಿಸಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya
error: Content is protected !!