32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

ಗೇರುಕಟ್ಟೆ: ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಗೇರುಕಟ್ಟೆ, ಇದರ ರಜತ ಮಹೋತ್ಸವದ ಪ್ರಯುಕ್ತ ಶಕ್ತಿ ಯುವಕಮಂಡಲ ಮತ್ತು ಮಹಾದಾನಿಗಳ ಸಹಕಾರದೊಂದಿಗೆ ಬಡ ಕುಟುಂಬದ ಶ್ರೀಮತಿ ಸೀತಾ ಇವರಿಗೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆಯನ್ನು ಅ. 24 ರಂದು ನಡುಮನೆ ಶ್ರೀನಿವಾಸ ಪುರೋಹಿತರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿನ ಅಧ್ಯಕ್ಷ ದಿವಾಕರ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಶಕ್ತಿ ಯುವಕಮಂಡಲದ ಅಧ್ಯಕ್ಷ ಉಮೇಶ್ ಕುಲಾಲ್, ಕುವೆಟ್ಟು ಗ್ರಾಮ ಪಂಚಾಯಿತಿನ ಸದಸ್ಯರಾದ ಸದಾನಂದ ಮೂಲ್ಯ, ಪ್ರಧಾನ ಕಾರ್ಯದರ್ಶಿಯಾದ ತಾರಾನಾಥ ನಾಯ್ಕ್, ಕಾರ್ಯದರ್ಶಿಯಾದ ಸಂತೋಷ ಭಾರ್ಗವಿ, ಕ್ರೀಡೆ ಕಾರ್ಯದರ್ಶಿಯಾದ ಸುದೇಶ್ ಆರ್ ಗೌಡ, ಮಾಧ್ಯಮ ಕಾರ್ಯದರ್ಶಿಯಾದ ಸತೀಶ್ ಸಾಲಿಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾದ ಯೋಗೀಶ್ ಕುಮಾರ್, ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ದೇವಣ್ಣ ಮೂಲ್ಯ, ಕಳಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ , ಸಿರಿಲ್ ಪಿಂಟೋ ಹಾಗೂ ಶಕ್ತಿ ಯುವಕಮಂಡಲದ ಪದಾಧಿಕಾರಿಗಳು, ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya
error: Content is protected !!