September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

ಗೇರುಕಟ್ಟೆ: ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಗೇರುಕಟ್ಟೆ, ಇದರ ರಜತ ಮಹೋತ್ಸವದ ಪ್ರಯುಕ್ತ ಶಕ್ತಿ ಯುವಕಮಂಡಲ ಮತ್ತು ಮಹಾದಾನಿಗಳ ಸಹಕಾರದೊಂದಿಗೆ ಬಡ ಕುಟುಂಬದ ಶ್ರೀಮತಿ ಸೀತಾ ಇವರಿಗೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆಯನ್ನು ಅ. 24 ರಂದು ನಡುಮನೆ ಶ್ರೀನಿವಾಸ ಪುರೋಹಿತರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿನ ಅಧ್ಯಕ್ಷ ದಿವಾಕರ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಶಕ್ತಿ ಯುವಕಮಂಡಲದ ಅಧ್ಯಕ್ಷ ಉಮೇಶ್ ಕುಲಾಲ್, ಕುವೆಟ್ಟು ಗ್ರಾಮ ಪಂಚಾಯಿತಿನ ಸದಸ್ಯರಾದ ಸದಾನಂದ ಮೂಲ್ಯ, ಪ್ರಧಾನ ಕಾರ್ಯದರ್ಶಿಯಾದ ತಾರಾನಾಥ ನಾಯ್ಕ್, ಕಾರ್ಯದರ್ಶಿಯಾದ ಸಂತೋಷ ಭಾರ್ಗವಿ, ಕ್ರೀಡೆ ಕಾರ್ಯದರ್ಶಿಯಾದ ಸುದೇಶ್ ಆರ್ ಗೌಡ, ಮಾಧ್ಯಮ ಕಾರ್ಯದರ್ಶಿಯಾದ ಸತೀಶ್ ಸಾಲಿಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾದ ಯೋಗೀಶ್ ಕುಮಾರ್, ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ದೇವಣ್ಣ ಮೂಲ್ಯ, ಕಳಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ , ಸಿರಿಲ್ ಪಿಂಟೋ ಹಾಗೂ ಶಕ್ತಿ ಯುವಕಮಂಡಲದ ಪದಾಧಿಕಾರಿಗಳು, ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ರಾಕಿಂಗ್ ಸ್ಟಾರ್ ಯಶ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!