24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

ಬಾರ್ಯ : ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅ.24 ವಿಜಯದಶಮಿಯಂದು ವಾಹನ ಪೂಜೆ ಹಾಗೂ ಮಹಾವಿಷ್ಣು ದೇವರ ವಿಶೇಷ ಪೂಜೆ ನಡೆದು ಭಾಸ್ಕರ್ ಬಾರ್ಯರವರು ಒಳಿತಿಗಾಗಿ ಪ್ರಾರ್ಥಿಸಿದರು. ನಂತರ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ ಜರಗಿತು.

ಬೈಲುವಾರು ಸಮಿತಿಯನ್ನು ಮತ್ತಷ್ಟು ಸಕ್ರಿಯಗೊಳಿಸಿ ಚುರುಕಾಗಿಸಿ ದೇವಸ್ಥಾನದ ಅಭಿವೃದ್ಧಿಗೆ ತೊಡಗಿಸಿಕೊಂಡು ಸದಾ ಕ್ರಿಯಾಶೀಲವಾಗಿರುವಂತೆ ಹಾಗೂ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ತೋಡಗಿಸಿಕೊಳ್ಳುವುದು ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಟ್ರಸ್ಟ್ ಪ್ರಮುಖರ ಯೋಜನೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವ ಎಲ್ಲಾ ಬೈಲುವಾರು ಸಮಿತಿಯ ಭಕ್ತರಿಗೆ ಸೇಸಪ್ಪ ಸಾಲ್ಯಾನ್ ಬಾರ್ಯ ಕೃತಜ್ಞತೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುಂದರ ನುರಿತ್ತಾಯ ಮುಂದಿನ ಅಭಿವೃದ್ಧಿ ಯೋಜನೆ ಬಗ್ಗೆ ತಿಳಿಸಿ ಸರ್ವರ ಸಹಕಾರ ಯಾಚಿಸಿದರು.

ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಪರ್ಂದ ಗುತ್ತು, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಟ್ರಸ್ಟಿ ರಾಜೇಶ್ ರಾವ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮನೋಹರ್ ಶೆಟ್ಟಿ ಬಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಿಯ ಹರಕೆ ಸೀರೆ ಹರಾಜು ಮಾಡಲಾಯಿತು.

Related posts

ಬೆಳ್ತಂಗಡಿ ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya
error: Content is protected !!