September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

ಬೆಳ್ತಂಗಡಿ: ಕಳೆದ ಮೂರು ತಿಂಗಳ ಹಿಂದೆ ಸುಲ್ಕೇರಿಯಲ್ಲಿ ನಡೆದ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾವರ ಗ್ರಾಮದ ಯುವಕ ವಿಘ್ನೇಶ್ (23 ವ) ಚಿಕಿತ್ಸೆ ಫಲಕಾರಿಯಾಗದೆ ಇಂದು ಅ.25, ಬೆಳಗ್ಗಿನ ಜಾವ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿಯಲ್ಲಿ ಕಳೆದ ಮೂರು ತಿಂಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳಿಯರ ಸಹಕಾರದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಮ ಸ್ಥಿತಿಯಲ್ಲಿದ್ದ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ನಂತರ ಉಜಿರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಊರಿನ ಸಂಘ ಸಂಸ್ಥೆಗಳು, ದಾನಿಗಳು ವೈದ್ಯಕೀಯ ನೆರವು ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗಿನ ಜಾವ ನಿಧನರಾದರು.

ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!