July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

ಬೆಳ್ತಂಗಡಿ: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಡ್ರೀಮ್ ಡೀಲ್ ಗ್ರೂಪ್ ನ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ನಗರ ಪಂಚಾಯತ್ ಬಿಲ್ಡಿಂಗ್ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಿತು.

ನೂತನ ಡಿಡಿ ಗ್ರೂಪ್ ನ್ನು ಬೆಳ್ತಂಗಡಿ ಚರ್ಚ್ ನ ಧರ್ಮಗುರುಗಳಾದ ರೇ.ಫಾ| ಕ್ಲಿಪರ್ಡ್ ಸೈಮನ್ ಪಿಂಟೋ ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷ ಬಿ.ಎ ನಝೀರ್, ನ್ಯಾಯವಾದಿ ಶಶಿಕಿರಣ್ ಜೈನ್ ಬೆಳ್ತಂಗಡಿ, ಡಿಡಿ ಗ್ರೂಪ್ಸ್ ಆಡಳಿತ ನಿರ್ದೇಶಕ ಸುಹೇಲ್, ಮೊಬೈಲ್ ಪ್ಯಾಲೇಸ್ ಮಾಲಕ ಉಮೇಶ್ ಪೂಜಾರಿ ಉಪಸ್ಥಿತರಿದ್ದು ಶುಭಕೋರಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಇಮ್ತಿಯಾಜ್ ಬೆಳ್ತಂಗಡಿ, ಸುಹೇಲ್ ಸಮಕ್ ಡೈನ್ ಬೆಳ್ತಂಗಡಿ, ಕಿಶಾನ್ ಭಟ್ ಕಟೀಲು,ಬದ್ರುದ್ದೀನ್ ಶಾಜ್ ಕಲೆಕ್ಷನ್ ಬೆಳ್ತಂಗಡಿ,ನಿತೇಶ್ ಎಸ್.ವಿ ಮೊಬೈಲ್ ಬೆಳ್ತಂಗಡಿ, ನಿಜಾಮ್ ರೋಯಲ್ ಝೋನ್ ಬೆಳ್ತಂಗಡಿ, ಪುತ್ತ ಬೆಳ್ತಂಗಡಿ ಹಾಗೂ ಇತರರು ಉಪಸ್ಥಿತರಿದ್ದು ಶುಭಕೋರಿದರು.

ರಾಯಲ್ ಝೋನ್ ಮಾಲಕ, ನಿರೂಪಕ ಮಹಮ್ಮದ್ ನಿಸಾರ್ ಸ್ವಾಗತಿಸಿ, ವಂದಿಸಿದರು. ಸಂಸ್ಥೆಯ ಪಾಲುದಾರರು ಅತಿಥಿ ಗಣ್ಯರನ್ನು ಸತ್ಕರಿಸಿದರು.

ಡಿಡಿ ಗ್ರೂಪ್ಸ್ ಸಂಸ್ಥೆಯು ಲಕ್ಕಿ ಸ್ಕೀಮ್ ನ್ನು ಮಾಡುತ್ತಿದ್ದು ರಾಜ್ಯಾದ್ಯಂತ ಹಲವಾರು ಶಾಖೆಗಳನ್ನು ತೆರದಿದ್ದಾರೆ. ತಿಂಗಳಿಗೆ ಒಂದು ಸಾವಿರದಂತೆ 20 ಕಂತು ಪಾವತಿಸಲು ಅವಕಾಶವಿದೆ. ಲಕ್ಕಿ ಡ್ರಾದಲ್ಲಿ ವಿಜೇತರಿಗೆ ಕಾರು, ದ್ವಿಚಕ್ರ ವಾಹನ, ಬಂಗಾರ, ಎಲೆಕ್ಟ್ರಾನಿಕ್ ಮುಂತಾದ ವಸ್ತುಗಳು ಸಿಗುತ್ತದೆ. ಕಂತು ಪಾವತಿಸಿ ಯಾವುದೇ ಬಹುಮಾನ ಬಾರದಿದ್ದರು ಕಟ್ಟಿದ ಮೊತ್ತದ ತಮಗೆ ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕರು ತಿಳಿಸಿದರು.

Related posts

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
error: Content is protected !!