23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ:ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇದರ ಸಹಯೋಗದೊಂದಿಗೆ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರವು ಅ. 26 ರಂದು ಉಜಿರೆ ಸಿದ್ದವನ ನರ್ಸರಿ ಕೇಂದ್ರ ನೀರಚಿಲುಮೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮತ್ತು ಪ್ರಗತಿಪರ ಕೃಷಿಕ ಹರೀಶ್ ರಾವ್ ಎಂ.ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎಲ್. ಎಚ್ ಮಂಜುನಾಥ್ ವಹಿಸಿ ಹಲವಾರು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ತೋಟಗಾರಿಕಾ ವಿಭಾಗದ ಪ್ರಬಂಧಕ ಬಾಲಕೃಷ್ಣ ಪೂಜಾರಿ, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್ ಚಂದ್ರಶೇಖರ, ಬೆಳಾಲು ಅಣಬೆ ಕೃಷಿಕ ಶ್ರೀಮತಿ ಮಧುರ, ಧರ್ಮಸ್ಥಳ ಜೇನು ಕೃಷಿಕ ಬಾಬು ಎಂ.ಕೆ ಭಾಗವಹಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ. ಕೃ.ಪ.ಸ.ಸಂಘದ ಅಧ್ಯಕ್ಷ ಪ್ರೀತಮ್ ಡಿ., ಧ. ಗ್ರಾ. ಯೋಜನೆಯ ನರ್ಸರಿ ಯೋಜನಾಧಿಕಾರಿ ದಯಾನಂದ ಗೌಡ, ಧರ್ಮಸ್ಥಳ ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ, ಸಿಬ್ಬಂದಿಗಳು, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಉಪಸ್ಥಿತರಿದ್ದರು.

Related posts

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya
error: Content is protected !!