26.5 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ