September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya
error: Content is protected !!