September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ.

ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭಯ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ ಇದ್ದು ಸಾವಿರ ಎಕರೆಗೂ ಹೆಚ್ಚಿನ ಅರಣ್ಯವಿದೆ. ಆಗಾಗ ಚಿರತೆ ಓಡಾಟ ಇರುವ ಸಾಧ್ಯತೆಯೂ ಇದೆ, ಬುಧವಾರ ರಾತ್ರಿಯ ವಿಚಾರ ಖಚಿತಗೊಂಡಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪ.ಪೂ. ವಿಭಾಗದಲ್ಲಿ “ಹೂಡಿಕೆಯ ವಿವಿಧ ಅವಕಾಶ” ಗಳ ಕುರಿತು ಕಾರ್ಯಾಗಾರ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya
error: Content is protected !!